ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಯುಪಿಎ ಔತಣಕ್ಕೆ

Last Updated 13 ಜುಲೈ 2012, 19:30 IST
ಅಕ್ಷರ ಗಾತ್ರ

ಕೋಲ್ಕತ್ತ (ಪಿಟಿಐ): ರಾಷ್ಟ್ರಪತಿ ಚುನಾವಣೆ ಪೂರ್ವಭಾವಿಯಾಗಿ ರಾಜಧಾನಿಯಲ್ಲಿ ಇದೇ 18ರಂದು ರಾತ್ರಿ ಮಿತ್ರಪಕ್ಷಗಳಿಗೆ ಯುಪಿಎ ಅಧ್ಯಕ್ಷೆ ಸೋನಿಯಾ ಗಾಂಧಿ ಏರ್ಪಡಿಸಿರುವ ಔತಣಕೂಟಕ್ಕೆ ನೀಡಿದ ಆಹ್ವಾನವನ್ನು ತೃಣಮೂಲ ಕಾಂಗ್ರೆಸ್ ನಾಯಕಿ ಮಮತಾ ಬ್ಯಾನರ್ಜಿ ಅವರು ತಿರಸ್ಕರಿಸಿದ್ದಾರೆ.

ಮಮತಾ ಅವರನ್ನು ದೂರವಾಣಿ ಮೂಲಕ ಸಂಪರ್ಕಿಸಿದ ಸೋನಿಯಾ ಅವರ ರಾಜಕೀಯ ಕಾರ್ಯದರ್ಶಿ ಅಹ್ಮದ್ ಪಟೇಲ್ ಔತಣಕೂಟಕ್ಕೆ ಆಹ್ವಾನ ನೀಡಿದರು. ಆದರೆ, ಅಂದು ತಮಗೆ ಔತಣಕೂಟಕ್ಕೆ ಹಾಜರಾಗುವುದು ಸಾಧ್ಯವಿಲ್ಲ ಎಂದು ಮಮತಾ ತಿಳಿಸಿದ್ದಾರೆ ಎಂದು ತೃಣಮೂಲ ಕಾಂಗ್ರೆಸ್ ಮೂಲಗಳು ತಿಳಿಸಿವೆ. 

`ದೀದಿ~ ಔತಣಕೂಟ ಬಹಿಷ್ಕರಿಸಿಲ್ಲ. ಪಕ್ಷದ ವತಿಯಿಂದ ಜುಲೈ 21ರಂದು ನಡೆಯಲಿರುವ ಹುತಾತ್ಮರ ದಿನಾಚರಣೆ ರ‌್ಯಾಲಿ ಸಿದ್ಧತೆಯಲ್ಲಿ ತೊಡಗಿದ್ದಾರೆ ಎಂದು  ಮೂಲಗಳು ಸ್ಪಷ್ಟಪಡಿಸಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT