ಮಂಗಳೂರು: ಸ್ವಾಮಿ ವಿವೇಕಾನಂದ ಅವರ ಜನ್ಮ ದಿನ ಆಚರಣೆ ಪ್ರಯುಕ್ತ ಪ್ರತಿ ವರ್ಷ ನಡೆಯುವ ರಾಷ್ಟ್ರ ಮಟ್ಟದ ಯುವಜನೋತ್ಸವದ ಈ ಬಾರಿಯ ಆತಿಥ್ಯದ ಅವಕಾಶ ಮಂಗಳೂರಿಗೆ ದಕ್ಕಿದೆ.
ಜನವರಿ 12ರಿಂದ ಆರಂಭವಾಗುವ ಐದು ದಿನಗಳ ಉತ್ಸವವನ್ನು ರಾಷ್ಟ್ರಪತಿ ಪ್ರತಿಭಾ ಪಾಟೀಲ್ ಉದ್ಘಾಟಿಸಲಿದ್ದಾರೆ. ನಗರದ 10 ಕಡೆಗಳಲ್ಲಿ 5 ಸಾವಿರ ಯುವ ಕಲಾವಿದರು ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ನಡೆಸಿಕೊಡಲಿದ್ದಾರೆ ಎಂದು ಜಿಲ್ಲಾಧಿಕಾರಿ ಎನ್.ಎಸ್.ಚನ್ನಪ್ಪ ಗೌಡ ಶುಕ್ರವಾರ ಇಲ್ಲಿ ಪತ್ರಕರ್ತರಿಗೆ ತಿಳಿಸಿದರು.