`ವಿದ್ಯಾರ್ಥಿನಿಗೆ ಕೃತಕ ಉಸಿರಾಟ ವ್ಯವಸ್ಥೆ ಮುಂದುವರಿಸಲಾಗಿದೆ. ಆಕೆಯ ದೇಹ ಸ್ಥಿತಿ ಗಂಭೀರವಾಗಿಯೇ ಇದೆ' ಎಂದೂ ಹೇಳಿದ್ದಾರೆ.
ಕಾಂಗ್ರೆಸ್ ಪ್ರಮುಖರ ಸಭೆ: ಪ್ರತಿಭಟನೆಯ ಹಿನ್ನೆಲೆಯಲ್ಲಿ ಉಂಟಾದ ಪರಿಸ್ಥಿತಿಯನ್ನು ಅವಲೋಕಿಸಲು ಕಾಂಗ್ರೆಸ್ ಪ್ರಮುಖರು ಬುಧವಾರ ಮತ್ತೊಮ್ಮೆ ಸಭೆ ಸೇರಿದ್ದರು.
ಎಎಪಿ ಆರೋಪ: `ತೋಮರ್ ಸಾವಿನ ಪ್ರಕರಣಕ್ಕೆ ರಾಜಕೀಯ ಬಣ್ಣ ಬಳಿಯುವ ಹುನ್ನಾರ ನಡೆದಿದೆ' ಎಂದು ಆಮ್ ಆದ್ಮಿ ಪಕ್ಷದ ಅರವಿಂದ ಕೇಜ್ರಿವಾಲ್ ದೂರಿದ್ದಾರೆ.
ವರ್ಮಾ ಸಮಿತಿ ಸಭೆ: ಮಹಿಳೆಯ ಮೇಲಿನ ದೌರ್ಜನ್ಯ ತಡೆ ಕುರಿತಂತೆ ಈವರೆಗೆ ಇ-ಮೇಲ್ ಮೂಲಕ 6,100 ಸಲಹೆಗಳು ಬಂದಿವೆ ಎಂದು ನ್ಯಾಯಮೂರ್ತಿ ವರ್ಮಾ
ಸಮಿತಿಯು ತಿಳಿಸಿದೆ. ಬುಧವಾರ ಸಮಿತಿಯ ಮೊದಲ ಸಭೆ ನಡೆಯಿತು.