ನವದೆಹಲಿ (ಐಎಎನ್ಎಸ್): ಯೆಮನ್ನಲ್ಲಿ ಆಡಳಿತಾರೂಢ ಸರ್ಕಾರ ಹಾಗೂ ಬಂಡುಕೋರರ ನಡುವಿನ ಸಂಘರ್ಷ ತೀವ್ರಗೊಂಡಿರುವ ಹಿನ್ನೆಲೆಯಲ್ಲಿ, ಅಲ್ಲಿ ನೆಲೆಸಿರುವ ಭಾರತೀಯರು ಕೂಡಲೇ ರಾಯಭಾರ ಕಚೇರಿಯನ್ನು ಸಂಪರ್ಕಿಸುವಂತೆ ಸೂಚಿಸಲಾಗಿದೆ.
ಸಂಕಷ್ಟದಲ್ಲಿರುವವರಿಗಾಗಿ ಸಹಾಯವಾಣಿ ಕೇಂದ್ರಗಳನ್ನು ತೆರೆಯಲಾಗಿದೆ ಮತ್ತು ಭಾರತೀಯರು ಸದ್ಯದ ಪರಿಸ್ಥಿತಿಯಲ್ಲಿ ಅಲ್ಲಿಂದ ದೇಶಕ್ಕೆ ವಾಪಸು ಮರಳುವುದೇ ಸೂಕ್ತ ಎಂದು ವಿದೇಶಾಂಗ ವ್ಯವಹಾರ ಇಲಾಖೆ ಮಂಗಳವಾರ ತಿಳಿಸಿದೆ.