ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಯೋಗೀಶ್ವರ್ ಕೈಬಿಡಲು ಆಗ್ರಹ

Last Updated 4 ಅಕ್ಟೋಬರ್ 2011, 19:30 IST
ಅಕ್ಷರ ಗಾತ್ರ

ಬೆಂಗಳೂರು: ಮೆಗಾಸಿಟಿ ನಿವೇಶನ ಹಂಚಿಕೆ ಹಗರಣದಲ್ಲಿ ಶಾಮೀಲಾದ ಆರೋಪ ಎದುರಿಸುತ್ತಿರುವ ಅರಣ್ಯ ಸಚಿವ ಸಿ.ಪಿ. ಯೋಗೀಶ್ವರ್ ಅವರನ್ನು ಸಂಪುಟದಿಂದ ಕೈಬಿಡಬೇಕು ಎಂದು ಮುಖ್ಯಮಂತ್ರಿ ಡಿ.ವಿ. ಸದಾನಂದ ಗೌಡ ಅವರಿಗೆ ಸೂಚಿಸುವಂತೆ ಕೋರಿ ಕಾಂಗ್ರೆಸ್ ಮುಖಂಡರ ನಿಯೋಗ ರಾಜ್ಯಪಾಲ ಎಚ್.ಆರ್. ಭಾರದ್ವಾಜ್ ಅವರಿಗೆ ಮಂಗಳವಾರ ಮನವಿ ಸಲ್ಲಿಸಿತು.

ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಾ.ಜಿ. ಪರಮೇಶ್ವರ್ ನೇತೃತ್ವದ ಕಾಂಗ್ರೆಸ್ ನಿಯೋಗ ರಾಜಭವ ನದಲ್ಲಿ ರಾಜ್ಯಪಾಲರನ್ನು ಭೇಟಿ ಮಾಡಿತು. `1994ರಿಂದ 2002ರ  ಅವಧಿಯಲ್ಲಿ ಮೆಗಾಸಿಟಿ ಡೆವಲ  ಪರ್ಸ್ ಅಂಡ್ ಬಿಲ್ಡರ್ಸ್ ಲಿಮಿಟೆಡ್  ಸಂಸ್ಥೆಯ ಎಂ.ಡಿ. ಆಗಿದ್ದ ಯೋಗೀಶ್ವರ್  ಸಂಸ್ಥೆಯ ಸದಸ್ಯರಿಗೆ ರೂ 37 ಕೋಟಿ ನಕಲಿ ಸಹಿ ಮೂಲಕ ವಂಚಿಸಿದ್ದಾರೆ~ ಎಂದು ಕಾಂಗ್ರೆಸ್ ಮನವಿಯಲ್ಲಿ ಆರೋಪಿಸಿದೆ.
 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT