ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಯೋಗೇಶ್ವರ್‌ ಇಂದು ಕಾಂಗ್ರೆಸ್‌ಗೆ

ಪಕ್ಷೇತರ ಶಾಸಕ ಸುಬ್ಬಾರೆಡ್ಡಿ ಆಡಳಿತ ಪಕ್ಷದತ್ತ
Last Updated 17 ಮಾರ್ಚ್ 2014, 19:30 IST
ಅಕ್ಷರ ಗಾತ್ರ

ಬೆಂಗಳೂರು: ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಶಾಸಕ ಸಿ.ಪಿ.ಯೋಗೇಶ್ವರ್ ಅವರು ಸಮಾಜವಾದಿ ಪಕ್ಷ ತೊರೆದು ಮಂಗಳವಾರ ಕಾಂಗ್ರೆಸ್‌ ಸೇರುವರು. ಬಾಗೇಪಲ್ಲಿ ವಿಧಾನಸಭಾ ಕ್ಷೇತ್ರದ ಪಕ್ಷೇತರ ಶಾಸಕ ಎಸ್‌.ಎನ್‌.ಸುಬ್ಬಾರೆಡ್ಡಿ ಕೂಡ ಕಾಂಗ್ರೆಸ್‌ ಸೇರಲು ನಿರ್ಧರಿಸಿದ್ದಾರೆ.

ಕೆಪಿಸಿಸಿ ಕಚೇರಿಯಲ್ಲಿ ಮಂಗಳವಾರ ಬೆಳಿಗ್ಗೆ 11 ಗಂಟೆಗೆ ನಡೆಯುವ ಕಾರ್ಯಕ್ರಮ­ದಲ್ಲಿ ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ್‌ ಅವರ ಉಪಸ್ಥಿತಿಯಲ್ಲೇ ಯೋಗೇಶ್ವರ್‌ ಅವರು ಕಾಂಗ್ರೆಸ್‌ ಸೇರುತ್ತಿದ್ದಾರೆ. ನಂತರ ಕೆಪಿಸಿಸಿ ಅಧ್ಯಕ್ಷರ ಜೊತೆಯಲ್ಲೇ ವಿಧಾನಸಭೆಯ ಅಧ್ಯಕ್ಷ ಕಾಗೋಡು ತಿಮ್ಮಪ್ಪ ಅವರನ್ನು ಭೇಟಿ­ಯಾಗಿ ಕಾಂಗ್ರೆಸ್‌ ಸೇರುತ್ತಿರುವ ಕುರಿತು ಪತ್ರ ಸಲ್ಲಿಸಲಿದ್ದಾರೆ.

2008ರ ಚುನಾವಣೆಯಲ್ಲಿ ಕಾಂಗ್ರೆಸ್‌ ಶಾಸಕರಾಗಿ ಆಯ್ಕೆಯಾಗಿದ್ದ ಯೋಗೇಶ್ವರ್, ಕೆಲ ತಿಂಗಳ ಬಳಿಕ ‘ಆಪರೇಷನ್‌ ಕಮಲ’ದ ಪರಿಣಾಮ­ವಾಗಿ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿ ಬಿಜೆಪಿ ಸೇರಿದ್ದರು. 

ಸುಬ್ಬಾರೆಡ್ಡಿ ಕಾಂಗ್ರೆಸ್‌ನತ್ತ: ಬಾಗೇಪಲ್ಲಿ ವಿಧಾನಸಭಾ ಕ್ಷೇತ್ರದ ಶಾಸಕ ಸುಬ್ಬಾರೆಡ್ಡಿ ಕೂಡ ಕಾಂಗ್ರೆಸ್‌ ಸೇರುವುದು ಬಹುತೇಕ ಖಚಿತವಾಗಿದೆ.
ವಿಧಾನಸಭಾ ಚುನಾವಣೆಯಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದ ಸುಬ್ಬಾರೆಡ್ಡಿ ಅವರು ಕಾಂಗ್ರೆಸ್‌ನ ಎನ್‌.ಸಂಪಂಗಿ ಅವರನ್ನು ಸೋಲಿಸಿ ವಿಧಾನಸಭೆ ಪ್ರವೇಶಿಸಿದ್ದರು. ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದಲ್ಲಿ ಮತ್ತೆ ಗೆಲುವು ಸಾಧಿ­ಸಲು ತಂತ್ರ ಹೆಣೆಯುತ್ತಿರುವ ಪೆಟ್ರೋಲಿಯಂ ಸಚಿವ ಎಂ.ವೀರಪ್ಪ ಮೊಯಿಲಿ ಅವರು, ಬಾಗೇಪಲ್ಲಿ ಶಾಸಕರನ್ನು ಕಾಂಗ್ರೆಸ್‌ಗೆ ಕರೆತರುವ ಪ್ರಯತ್ನಕ್ಕೆ ಕೈ­ಹಾಕಿದ್ದರು. ಕಾಂಗ್ರೆಸ್‌ ನಾಯಕರ ಆಹ್ವಾನಕ್ಕೆ ಪ್ರತಿಕ್ರಿಯಿಸಿರುವ ಸುಬ್ಬಾರೆಡ್ಡಿ, ಕಾಂಗ್ರೆಸ್‌ ಪಕ್ಷ ಸೇರಲು ಸಮ್ಮತಿ ಸೂಚಿಸಿದ್ದಾರೆ ಎಂದು ಗೊತ್ತಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT