ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಯೋಜನೆ ಜನರಿಗೆ ತಲುಪಲಿ

Last Updated 15 ಅಕ್ಟೋಬರ್ 2012, 8:20 IST
ಅಕ್ಷರ ಗಾತ್ರ

ಕಾಪು (ಪಡುಬಿದ್ರಿ): `ಪಕ್ಷ ಬಲಿಷ್ಠವಾಗಬೇಕಾದರೆ ಕಾರ್ಯಕರ್ತರ ಪರಿಶ್ರಮ ಅತೀ ಮುಖ್ಯ. ಈ ನಿಟ್ಟಿನಲ್ಲಿ ಪ್ರತಿ ಬೂತ್ ಮಟ್ಟದ ಕಾರ್ಯಕರ್ತರು ಯುಪಿಎ ಸರ್ಕಾರದ ಯೋಜನೆಗಳನ್ನು ಜನರಿಗೆ ತಲುಪಿಸುವ ಕಾರ್ಯ ಮಾಡಬೇಕು~ ಎಂದು ರಾಜ್ಯಸಭಾ ಸದಸ್ಯ ಆಸ್ಕರ್ ಫರ್ನಾಂಡಿಸ್ ಹೇಳಿದ್ದಾರೆ.

ಭಾನುವಾರ ಕಾಪುವಿನ ರಾಜೀವ್ ಭವನದಲ್ಲಿ ಕಾಪು ಬ್ಲಾಕ್ ಕಾಂಗ್ರೆಸ್ ವತಿಯಿಂದ ಆಯೋಜಿಸಿದ್ದ ಕಾರ್ಯಕರ್ತರ ಸಭೆಯನ್ನು ಉದ್ದೇಶಿಸಿ ಮಾತನಾಡಿದರು. `ಯುಪಿಎ ಸರ್ಕಾರ ಹಲವಾರು ಯೋಜನೆಗಳನ್ನು ಜಾರಿಗೊಳಿಸಿದ್ದು, ಇವುಗಳನ್ನು ಸಮಪರ್ಕಕವಾಗಿ ಜನರು ಬಳಸುವಂತಾಗಬೇಕು. ಪ್ರತಿ ಗ್ರಾಮದ ಜನರಿಗೆ,

ಅಸಹಾಯಕರಿಗೆ, ಅಸಂಘಟಿತ ವಲಯದ ಕಾರ್ಮಿಕರಿಗೆ, ಕಡುಬಡವರಿಗೆ ಸರ್ಕಾರದಿಂದ ಸಿಗಬೇಕಾದ ಸವಲತ್ತುಗಳು ತಲುಪುತ್ತಿವೆ ಎಂಬ ಮಾಹಿತಿ ಪಡೆದುಕೊಳ್ಳಬೇಕು. ಸರ್ಕಾರದ ಯೋಜನೆಗಳನ್ನು ಸಮರ್ಪಕವಾಗಿ ಬಳಕೆಯಾಗದಿದ್ದಲ್ಲಿ ಈ ವೇಳೆ ಅವರಿಗೆ ತಲುಪಿಸುವ ಕಾರ್ಯ ಮಾಡಬೇಕಾದುದು ಅತೀ ಅಗತ್ಯ~ ಎಂದರು.

ಇಂದು ದೇಶದ ಅದೆಷ್ಟೋ ಮಂದಿ ರೇಷನ್ ಕಾರ್ಡ್ ಇಲ್ಲದೆ ಜೀವನ ನಡೆಸುತಿದ್ದಾರೆ ಎಂದು ಬೇಸರ ವ್ಯಕ್ತಪಡಿಸಿದ ಅವರು, ಇಂದಿನ ದಿನ ಸುದಿನ, ನಾಳೆಯ ದಿನ ಕಠಿಣ. ಈ ಧ್ಯೇಯಯೊಂದಿಗೆ ಕಾರ್ಯಕರ್ತರು ಇಂದೇ ಪಕ್ಷದ ಸರ್ಕಾರದ ಯೋಜನೆಗಳ ಬಗ್ಗೆ ಮಾಹಿತಿ ನೀಡಿ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT