ಪ್ರತಿಯೊಂದು ಕುಟುಂಬವೂ ಶೌಚಾಲಯ ಹೊಂದಿರಬೇಕು ಎಂಬ ಆಶಯದಿಂದ ಸರ್ಕಾರ ಯೋಜನೆಗಳನ್ನು ರೂಪಿಸಿದೆ.
ಆದರೆ ಈ ಯೋಜನೆಗಳು ದುರ್ಬಳಕೆಯಾಗುತ್ತಿವೆ. ಈ ಬಗೆಯ ಯೋಜನೆಗಳ ಸಮರ್ಪಕ ಜಾರಿಗೆ ಗ್ರಾಮಗಳಲ್ಲಿ ಸಭೆಗಳನ್ನು ನಡೆಸಿ ಜನರಲ್ಲಿ ಜಾಗೃತಿ ಮೂಡಿಸಬೇಕು. ಅರ್ಹರಿಗೆ ಯೋಜನೆ ತಲುಪುವಂತೆ ಮಾಡಬೇಕು.
ಆದರೆ, ಅಧಿಕಾರಿಗಳು ಮತ್ತು ಪಂಚಾಯ್ತಿ ಹಂತದ ಜನಪ್ರತಿನಿಧಿಗಳು ತಮಗೆ ಬೇಕಾದವರಿಗೆ, ಆಪ್ತರಿಗೆ ಮಾತ್ರ ದೊರಕಿಸಿಕೊಡುತ್ತಾರೆ. ಯೋಜನೆಯ ಉದ್ದೇಶ ಒಳ್ಳೆಯದಾಗಿದ್ದರೆ ಸಾಲದು; ಅನುಷ್ಠಾನದಲ್ಲಿ ಅದರ ಸಾರ್ಥಕ್ಯ ಅಡಗಿದೆ.