ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಯೋಜನೆ ರೂಪಿಸಲು ಜನಗಣತಿ ಸಹಕಾರಿ-ಡಾ.ಡಿ.ವೀರೇಂದ್ರ ಹೆಗ್ಗಡೆ ಅಭಿಮತ

Last Updated 10 ಫೆಬ್ರುವರಿ 2011, 9:35 IST
ಅಕ್ಷರ ಗಾತ್ರ

ಬೆಳ್ತಂಗಡಿ: ದೇಶದ ಜನಸಂಖ್ಯೆಯ ಆಧಾರದಲ್ಲಿ ಕುಟುಂಬ ವ್ಯವಸ್ಥೆ, ಆರ್ಥಿಕ ಪರಿವರ್ತನೆ, ಸಾಮಾಜಿಕ ಸ್ಥಿತ್ಯಂತರ ಮೊದಲಾದ ಅಂಶಗಳನ್ನು ಪರಿಶೀಲಿಸಿ ಸರ್ಕಾರ ಮುಂದಿನ ಯೋಜನೆ ರೂಪಿಸಲು ಜನಗಣತಿ ಅತಿ ಅಗತ್ಯವಾಗಿದೆ, ಎಲ್ಲಾ ಪ್ರಜೆಗಳು ಮತ್ತು ಗಣತಿದಾರರು ಹೊಣೆಗಾರಿಕೆಯಿಂದ ಯಶಸ್ವಿ ಜನಗಣತಿ ಕಾರ್ಯಕ್ಕೆ ಸಹಕರಿಸಬೇಕು ಎಂದು ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆ ಸಲಹೆ ಮಾಡಿದ್ದಾರೆ.

ಧರ್ಮಸ್ಥಳದಲ್ಲಿ ಬುಧವಾರ ಜನಗಣತಿ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು. ದೇಶದ ಪ್ರಗತಿಗಾಗಿ ಸೂಕ್ತ ಯೋಜನೆ ರೂಪಿಸಲು ಜನಗಣತಿ ಅಮೂಲ್ಯ ಕೊಡುಗೆ ನೀಡುತ್ತದೆ ಎಂದು ಅವರು ಹೇಳಿದರು.

ಗಣತಿದಾರರು ಬಂದಾಗ ತುಳುವರು ತಮ್ಮ ಮಾತೃ ಭಾಷೆ ‘ತುಳು’ ಎಂದು ನೋಂದಾಯಿಸಬೇಕು ಎಂದ ಅವರು  ಇದರಿಂದ ತುಳುವರಿಗೆ ಸಂವಿಧಾನಾತ್ಮಕವಾಗಿ ವಿಶೇಷ ಸೌಲಭ್ಯ-ಸವಲತ್ತು ಪಡೆಯಲು ಅನುಕೂಲವಾಗುತ್ತದೆ ಎಂದು ಅಭಿಪ್ರಾಯಪಟ್ಟರು. ಹೇಮಾವತಿ ವಿ. ಹೆಗ್ಗಡೆ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT