ಶನಿವಾರ, 27 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಯೋಜನೆಗಳಿಂದ ಜನರಿಗೆ ಲಾಭ- ರೇವು ನಾಯಕ್

Last Updated 21 ಫೆಬ್ರುವರಿ 2012, 19:30 IST
ಅಕ್ಷರ ಗಾತ್ರ

ಬಸವಕಲ್ಯಾಣ: ಸರ್ಕಾರದ ವಿವಿಧ ಯೋಜನೆಗಳು ಗ್ರಾಮೀಣ ಭಾಗದ ಜನರ ಜೀವನಮಟ್ಟ ಸುಧಾರಣೆಗೆ ಸಹಕಾರಿಯಾಗಿದ್ದು ಈ ಬಗ್ಗೆ ಪ್ರಚಾರ ಕೈಗೊಳ್ಳುವುದು ಅವಶ್ಯಕವಾಗಿದೆ ಎಂದು ಪಶು ಸಂಗೋಪನಾ ಇಲಾಖೆ ಸಚಿವ ರೇವುನಾಯಕ್ ಬೆಳಮಗಿ ಅಭಿಪ್ರಾಯಪಟ್ಟರು.

ಇಲ್ಲಿ ಮಂಗಳವಾರ ವಾರ್ತಾ ಇಲಾಖೆ ಮತ್ತು ತಾಲ್ಲೂಕು ಆಡಳಿತದಿಂದ ತಾಲ್ಲೂಕಿನ 120 ಗ್ರಾಮಗಳಲ್ಲಿ ನಡೆಯಲಿರುವ ಗುಲ್ಬರ್ಗ ವಿಭಾಗಮಟ್ಟದ ಬಹುಮಾಧ್ಯಮ ಪ್ರಚಾರಾಂದೋಲನ ಉದ್ಘಾಟಿಸಿ ಮಾತನಾಡಿದರು.

ವಾರ್ತಾ ಇಲಾಖೆ ಸಹಾಯಕ ನಿರ್ದೇಶಕ ಜಿ.ಚಂದ್ರಕಾಂತ, ಯೋಜನಾ ಪ್ರಾಧಿಕಾರದ ಅಧ್ಯಕ್ಷ ರವಿ ಚಂದನಕೆರೆ ಮಾತನಾಡಿದರು. ನಗರಸಭೆ ಅಧ್ಯಕ್ಷೆ ಮಂಗಲಾಬಾಯಿ ಉದ್ರೆ, ತಾಲ್ಲೂಕು ಪಂಚಾಯಿತಿ ಅಧ್ಯಕ್ಷ ಗುರುಲಿಂಗಪ್ಪ ಸೈದಾಪುರೆ, ಎ.ಪಿ.ಎಂ.ಸಿ. ಅಧ್ಯಕ್ಷ ಪ್ರಕಾಶ ಮೆಂಡೋಳೆ, ತಹಶೀಲ್ದಾರ ಜಗನ್ನಾಥರೆಡ್ಡಿ ಉಪಸ್ಥಿತರಿದ್ದರು.

ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಹಣಾ ಅಧಿಕಾರಿ ಬಸವರಾಜ ಚಿರಡೆ ಈ ಸಂದರ್ಭದಲ್ಲಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT