ಮಡಿಕೇರಿ: ಮಡಿಕೇರಿ ಹಾಗೂ ವಿರಾಜಪೇಟೆ ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧಿಸಲು ಬಯಸಿ ಸೋಮವಾರ ಆರು ಅಭ್ಯರ್ಥಿಗಳು ನಾಮಪತ್ರಗಳು ಸಲ್ಲಿಸಿದ್ದಾರೆ.
ಮಡಿಕೇರಿ ಕ್ಷೇತ್ರ: ಬಿಜೆಪಿಯಿಂದ ಅಪ್ಪಚ್ಚು ರಂಜನ್, ಕಾಂಗ್ರೆಸ್ಸಿನಿಂದ ಕೆ.ಎಂ. ಲೋಕೇಶ್, ಜೆಡಿಎಸ್ನಿಂದ ಬಿ.ಎ. ಜೀವಿಜಯ ಹಾಗೂ ಪಕ್ಷೇತರ ಅಭ್ಯರ್ಥಿಯಾಗಿ ರಫೀಕ್ ಖಾನ್ ನಾಮಪತ್ರ ಸಲ್ಲಿಸಿದ್ದಾರೆ.
ವಿರಾಜಪೇಟೆ ಕ್ಷೇತ್ರ: ಬಿಜೆಪಿಯಿಂದ ಕೆ.ಜಿ. ಬೋಪಯ್ಯ ಹಾಗೂ ಕಾಂಗ್ರೆಸ್ಸಿನಿಂದ ಬಿ.ಟಿ. ಪ್ರದೀಪ್ ನಾಮಪತ್ರ ಸಲ್ಲಿಸಿದ್ದಾರೆ.
ಇದುವರೆಗೆ ಜಿಲ್ಲೆಯ ಎರಡು ವಿಧಾನಸಭಾ ಕ್ಷೇತ್ರಗಳಿಗೆ ಒಟ್ಟು 8 ಮಂದಿ ನಾಮಪತ್ರ ಸಲ್ಲಿಸಿದಂತಾಗಿದೆ. ಮಡಿಕೇರಿ ವಿಧಾನಸಭಾ ಕ್ಷೇತ್ರಕ್ಕೆ ಒಟ್ಟು 6 ಮಂದಿ ಹಾಗೆಯೇ ವಿರಾಜಪೇಟೆ ವಿಧಾನಸಭಾ ಕ್ಷೇತ್ರಕ್ಕೆ ಇಬ್ಬರು ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಿದ್ದಾರೆ.
ನಾಮಪತ್ರ ಸಲ್ಲಿಸಲು ಏಪ್ರಿಲ್ 17 ಕೊನೆಯ ದಿನವಾಗಿದೆ. ಬೆಳಗ್ಗೆ 11 ರಿಂದ ಮಧ್ಯಾಹ್ನ 3 ಗಂಟೆಯೊಳಗೆ ನಾಮಪತ್ರ ಸಲ್ಲಿಸಲು ಅವಕಾಶವಿದೆ.
ಏಪ್ರಿಲ್ 18ರಂದು ನಾಮಪತ್ರ ಪರಿಶೀಲನೆ ಕಾರ್ಯ ನಡೆಯಲಿದೆ. ಏಪ್ರಿಲ್, 20ರಂದು ನಾಮಪತ್ರ ವಾಪಸ್ಸು ತೆಗೆದುಕೊಳ್ಳುವ ದಿನವಾಗಿದೆ.
ಮೇ, 5ರಂದು ಮತದಾನವು ಬೆಳಗ್ಗೆ 7 ರಿಂದ ಸಂಜೆ 5ಗಂಟೆವರೆಗೆ ನಡೆಯಲಿದೆ. ಮೇ.8ರಂದು ಮತ ಎಣಿಕೆ ನಡೆಯಲಿದೆ.