ಬೆಂಗಳೂರು: ರಂಜಾನ್ ಹಬ್ಬದ ಅಂಗವಾಗಿ ನಗರದ ಹೋಟೆಲ್ ಹಾಗೂ ರೆಸ್ಟೋರೆಂಟ್ಗಳು ಆಗಸ್ಟ್ 9ರವರೆಗೆ ರಾತ್ರಿ 12ರಿಂದ 1 ಗಂಟೆಯವರೆಗೆ ತೆರೆಯಲು ಅವಕಾಶ ನೀಡಲಾಗಿದೆ ಎಂದು ನಗರ ಪೊಲೀಸ್ ಕಮಿಷನರ್ ರಾಘವೇಂದ್ರ ಔರಾದಕರ್ ತಿಳಿಸಿದ್ದಾರೆ.
ಈ ಹಿಂದೆ ನಗರದ ಹೋಟೆಲ್ ಹಾಗೂ ರೆಸ್ಟೋರೆಂಟ್ಗಳನ್ನು 11 ಗಂಟೆಗೆ ಮುಚ್ಚಲಾಗುತ್ತಿತ್ತು. ರಂಜಾನ್ ಹಿನ್ನೆಲೆಯಲ್ಲಿ ಮುಸ್ಲಿಂ ಬಾಂಧವರು ರಾತ್ರಿ ವೇಳೆ ಹೆಚ್ಚಿನ ಸಂಖ್ಯೆಯಲ್ಲಿ ಹೋಟೆಲ್ ಹಾಗೂ ರೆಸ್ಟೋರೆಂಟ್ಗಳಿಗೆ ಬರುವ ಕಾರಣ ಆಗಸ್ಟ್ 9ರವರೆಗೆ ಈ ವಿಶೇಷ ಅನುಮತಿ ನೀಡಲಾಗಿದೆ ಎಂದು ಪ್ರಕಟಣೆಯಲ್ಲಿ ಹೇಳಿದ್ದಾರೆ.