ಜಿಲ್ಲಾ ಪಂಚಾಯಿತಿ ಸದಸ್ಯೆ ಕುಮಾರಿ ವಾಸುದೇವನ್ ನೀರು ಸರಬರಾಜು ಯೋಜನೆ ಉದ್ಘಾಟಿಸಿದರು. ತಾಲ್ಲೂಕು ಪಂಚಾಯಿತಿ ಉಪಾಧ್ಯಕ್ಷೆ ಪುಲಸ್ಯಾ ರೈ ನಿವೇಶನ ಆದೇಶ ಪತ್ರ ವಿತರಿಸಿದರು.
ತಾಲ್ಲೂಕು ಪಂಚಾಯಿತಿ ಸದಸ್ಯರಾದ ಸರೋಜಿನಿ, ದಿವ್ಯಾ ಬಾಲಕೃಷ್ಣ, ಓಂಬುರ್ಡ್ಸ್ಮನ್ ನೋಡೆಲ್ ಅಧಿಕಾರಿ ಶೀನ ಶೆಟ್ಟಿ, ಪುತ್ತೂರು ಎಪಿಎಂಸಿ ಅಧ್ಯಕ್ಷ ಸೀತಾರಾಮ ಗೌಡ, ಗ್ರಾಮ ಪಂಚಾಯಿತಿ ಅಧ್ಯಕ್ಷ ಕೆ. ಸತೀಶ್ ಮಾತನಾಡಿದರು.
ಕಡಬ ಸಿ.ಎ. ಬ್ಯಾಂಕ್ ಉಪಾಧ್ಯಕ್ಷ ಗೋಪಾಲ ಗೌಡ, ಜಿಲ್ಲಾ ಪಂಚಾಯಿತಿ ಸಹಾಯಕ ಎಂಜಿನಿಯರ್ ಪ್ರಭಾಚಂದ್ರ, ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ.ಆಶಾ, ಮೆಸ್ಕಾಂ ಎಂಜಿನಿಯರ್ ಸಜಿ ಕುಮಾರ್, ಸಬ್ಇನ್ಸ್ಪೆಕ್ಟರ್ ಪೌಲ್ ಪ್ರಿಯಾ ಕುಮಾರ್, ಪಂಚಾಯಿತಿ ಕಾರ್ಯದರ್ಶಿ ವಾಸುದೇವ ಗೌಡ, ಪಂಚಾಯತಿ ಉಪಾಧ್ಯಕ್ಷೆ ಶ್ಯಾಮಲಾ, ಗ್ರಾಮ ಪಂಚಾಯಿತಿ ಸದಸ್ಯ ಇಸ್ಮಾಯಿಲ್, ನಾರಾಯಣ ಶೆಟ್ಟಿ ಇದ್ದರು.