ವಿಜಯಪುರ: ಇಲ್ಲಿನ ಪತಂಜಲಿ ಯೋಗಶಿಕ್ಷಣ ಸಮಿತಿ ರಥಸಪ್ತಮಿ ಆಚರಣೆ ಪ್ರಯುಕ್ತ ಸರ್ಕಾರಿ ಪದವಿಪೂರ್ವ ಕಾಲೇಜಿನ ಆವರಣದಲ್ಲಿ ಸಾಮೂಹಿಕ ಸೂರ್ಯ ನಮಸ್ಕಾರ ಕಾರ್ಯಕ್ರಮ ಹಮ್ಮಿಕೊಂಡಿತ್ತು. ಬೆಳಿಗ್ಗೆ ಬ್ರಾಹ್ಮೀಮುಹೂರ್ತದಲ್ಲಿ ಅಗ್ನಿಹೋತ್ರ, ಮತ್ತಿತರ ಕಾರ್ಯಕ್ರಮಗಳು ನಡೆದವು. ಸಂಜೆ ನಡೆದ ಸಾಮೂಹಿಕ ಸೂರ್ಯನಮಸ್ಕಾರ ಕಾರ್ಯಕ್ರಮದಲ್ಲಿ ಪಟ್ಟಣದ 18 ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು. ಪತಂಜಲಿ ಯೋಗಶಿಕ್ಷಣ ಸಮಿತಿ ದೀಪಾರಮೇಶ್ ಸೂರ್ಯನಮಸ್ಕಾರ ಮತ್ತು ರಥಸಪ್ತಮಿ ಕುರಿತು ಉಪನ್ಯಾಸ ನೀಡಿದರು. ಭಾರತಿ ಪ್ರಭುದೇವ್ ಶಾರೀರಿಕ ಅಭ್ಯಾಸ ತರಬೇತಿ ನೀಡಿದರು.