ಬೆಂಗಳೂರು: ‘ರಸ್ತೆ ನಿರ್ಮಾಣ ಕಾಮಗಾರಿಯಲ್ಲಿ ನಡೆದಿರುವ ಅಕ್ರಮಗಳ ವಿರುದ್ಧ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲಿಸಬೇಕು’ ಎಂದು ಲೋಕಸತ್ತಾ ಪಕ್ಷದ ರಾಜ್ಯ ಘಟಕದ ಅಧ್ಯಕ್ಷ ಡಾ. ಅಶ್ವಿನ್ ಮಹೇಶ್ ಆಗ್ರಹಿಸಿದ್ದಾರೆ.
ಮುಖ್ಯಮಂತ್ರಿ ಸಿದ್ದರಾಮಯ್ಯ, ಮೇಯರ್ ಬಿ.ಎಸ್. ಸತ್ಯನಾರಾಯಣ ಮತ್ತು ಬಿಬಿಎಂಪಿ ಆಯುಕ್ತ ಎಂ. ಲಕ್ಷ್ಮಿನಾರಾಯಣ ಅವರಿಗೆ ಈ ಕುರಿತು ಅಶ್ವಿನ್ ಪತ್ರ ಬರೆದಿದ್ದಾರೆ.
‘ಪಾಲಿಕೆಗೆ ನಷ್ಟವಾಗಿರುವ ಹಣ ವಾಪಸು ಪಡೆಯಬೇಕು. ರಸ್ತೆ ಇತಿಹಾಸ ಪೂರ್ತಿಯಾಗದ ಹೊರತು ಯಾವುದೇ ಹೊಸ ಕಾಮಗಾರಿಗೆ ಚಾಲನೆ ನೀಡಬಾರದು. ಟೆಂಡರ್ ಪ್ರಕ್ರಿಯೆಯಲ್ಲಿ ಪಾರದರ್ಶಕ ನೀತಿ ಜಾರಿಗೆ ತರಬೇಕು’ ಎಂದು ಒತ್ತಾಯಿಸಿದ್ದಾರೆ.