ಈ ಹಿಂದೆ ಮಂಡ್ಯಕ್ಕೆ ಭೇಟಿ ನೀಡಿದ್ದ ಮುಖ್ಯಮಂತ್ರಿಗಳು ಮಂಡ್ಯದಲ್ಲಿ ನಿರ್ಮಾಣ ಮಾಡಲು ಉದ್ದೇಶಿಸಿರುವ ಡಾ.ಬಿ.ಆರ್.ಅಂಬೇಡ್ಕರ್ ಭವನಕ್ಕೆ ರೂ.5 ಕೋಟಿ ಹಣ ಬಿಡುಗಡೆ ಮಾಡುವುದಾಗಿ ಭರವಸೆ ನೀಡಿದ್ದರು. 5 ತಿಂಗಳಾದರೂ ಹಣ ನೀಡದೆ ವಿಳಂಬ ಧೋರಣೆ ಅನುಸರಿಸಿದ್ದಾರೆ ಎಂದು ದಸಂಸ ಮುಖಂಡ ಕುಬೇರಪ್ಪ, ಗ್ರಾ.ಪಂ. ಮಾಜಿ ಅಧ್ಯಕ್ಷ ನಂದೀಶ್ಕುಮಾರ್ ದೂರಿದರು.