ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರಸ್ತೆ ದುಃಸ್ಥಿತಿ: ಜನರ ಪರದಾಟ

Last Updated 23 ಫೆಬ್ರುವರಿ 2012, 6:50 IST
ಅಕ್ಷರ ಗಾತ್ರ

ಗೌರಿಬಿದನೂರು:  ತಾಲ್ಲೂಕಿನ ಮಧುಗಿರಿ ರೈಲ್ವೆ ಗೇಟ್ ಸಮೀಪದ ನ್ಯಾಯಾಲಯಕ್ಕೆ ತೆರಳುವ ರಸ್ತೆಯೂ ಕೆಲವೇ ತಿಂಗಳು ಹಿಂದೆ ದುರಸ್ತಿ ಕಂಡಿತ್ತು.  ಆದರೆ ಚರಂಡಿ ಕಾಮಗಾರಿಯಿಂದ  ರಸ್ತೆಯಲ್ಲಿ ಗುಂಡಿ ತೋಡಿ ಹಲವು ದಿನಗಳು ಕಳೆದಿವೆ. ಅತ್ತ ಪೂರ್ಣ ಆಗಿಲ್ಲ. ಇತ್ತ ದುರಸ್ತಿ ನಡೆದಿಲ್ಲ. ಇದರಿಂದ ಈಗ ರಸ್ತೆಯಲ್ಲಿ ಸಂಚರಿಸುವುದೇ ಕಷ್ಟಸಾಧ್ಯವಾಗಿದೆ.

ಚರಂಡಿ ಮೇಲಿನ ಚಪ್ಪಡಿ ಕಲ್ಲುಗಳನ್ನು ತೆಗೆದಿರುವುದರಿಂದ ಈಗ ಚರಂಡಿ ಬಾಯ್ದೆರಿದೆ. ಈ ರಸ್ತೆಯಲ್ಲಿ  ಪ್ರತಿ ನಿತ್ಯ ನೂರಾರು ವಾಹನಗಳು ಸಂಚರಿಸುತ್ತವೆ.

ಹಲವು ಬಾರಿ ದ್ವಿಚಕ್ರವಾಹನ ಸವಾರರು ಬಿದ್ದು ಕಾಲು ಮುರಿದುಕೊಂಡು ಬಿದ್ದಿರುವ ಘಟನೆಗಳು ಜರುಗಿವೆ. ಸಮಸ್ಯೆ ಬಗ್ಗೆ ಜನಪ್ರತಿನಿಧಿಗಳಿಗೆ ಗೊತ್ತಿದ್ದರೂ ಯಾವುದೇ ಕ್ರಮ ಕೈಗೊಳ್ಳುತ್ತಿಲ್ಲ ಎಂದು ನಾಗರಿಕರು ದೂರುತ್ತಾರೆ. ಅಧಿಕಾರಿಗಳು ಕೂಡಲೇ ಕ್ರಮಕೈಗೊಂಡರೆ ಜನರು ಸಂಚರಿಸಬಹುದು ಎನ್ನುತ್ತಾರೆ ಸ್ಥಳೀಯರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT