ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರಸ್ತೆ ದುರಸ್ತಿಗೆ ಆಗ್ರಹ

Last Updated 1 ಫೆಬ್ರುವರಿ 2011, 10:40 IST
ಅಕ್ಷರ ಗಾತ್ರ

ಸಂತೇಮರಹಳ್ಳಿ: ಸಮೀಪದ ಮಂಗಲ ಗ್ರಾಮದಿಂದ ಸಪ್ಪಯ್ಯನಪುರಕ್ಕೆ ಹೋಗುವ ರಸ್ತೆ ತೀವ್ರ ಹದಗೆಟ್ಟಿದ್ದು, ವಾಹನ ಸಂಚಾರಕ್ಕೆ ತೊಂದರೆ ಆಗಿದೆ. ಮಂಗಲ-ಚಾಮರಾಜನಗರಕ್ಕೆ ಸಂಪರ್ಕ ಕಲ್ಪಿಸುವ ಈ ರಸ್ತೆ ಸುಮಾರು 3ಕಿ.ಮೀ. ಉದ್ದವಿದೆ. ಇದರಲ್ಲಿ ಒಂದೂವರೆ ಕಿ.ಮೀ.ವರೆಗೆ ಮಾತ್ರ ಡಾಂಬರು ಹಾಕಲಾಗಿದೆ. ಉಳಿದ ರಸ್ತೆಗೆ ಡಾಂಬರು ಹಾಕಿಲ್ಲ. ಇದರಿಂದ ರಸ್ತೆ ಸಂಪೂರ್ಣವಾಗಿ ಹದಗೆಟ್ಟಿದೆ.

ವಾಹನಗಳ ಓಡಾಟದಿಂದ ಜಲ್ಲಿಕಲ್ಲು ಮೇಲೆದ್ದಿವೆ. ರೈತರು ತಮ್ಮ ಜಮೀನುಗಳಿಗೆ ಈ ರಸ್ತೆಯಲ್ಲಿ ಸಂಚರಿಸಬೇಕಿದೆ. ಎತ್ತಿನಗಾಡಿ ಹಾಗೂ ಸರಕು ಸಾಗಣೆ ಆಟೋಗಳು ಹೆಚ್ಚಾಗಿ ಓಡಾಡುತ್ತವೆ. ಮಳೆಗಾಲದ ವೇಳೆ ಗುಂಡಿಗಳಲ್ಲಿ ನೀರು ತುಂಬಿ ಕೊಳ್ಳುತ್ತದೆ. ಆಗ ಸಂಚರಿಸುವುದು ಕಷ್ಟ. ಕೂಡಲೇ, ಈ ಬಗ್ಗೆ ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳು ಕ್ರಮಕೈ ಗೊಂಡು ರಸ್ತೆ ದುರಸ್ತಿಪಡಿಸಬೇಕು ಎಂದು ಗ್ರಾಮಸ್ಥರು ಆಗ್ರಹಿಸಿದ್ದಾರೆ.
 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT