ರಸ್ತೆಯಲ್ಲಿ ಸಮರ್ಪಕ ಚರಂಡಿ ನಿರ್ಮಿಸಿಲ್ಲ. ಅಲ್ಲಲ್ಲಿ ಕೊಳಚೆ ನೀರು ಕಟ್ಟಿಕೊಂಡು ದುರ್ವಾಸನೆ ಬರುತ್ತಿದೆ. ಮಳೆಗಾಲದಲ್ಲಿ ಚರಂಡಿ ನೀರು ರಸ್ತೆಗೆ ನುಗ್ಗಿ ಓಡಾಟ ದುಸ್ತರವಾಗುತ್ತದೆ ಎಂದು ಆಕ್ರೋಶ ವ್ಯಕ್ತಪಡಿಸಿದರು. ಮೆರವಣಿಗೆಯಲ್ಲಿ ಬಂದು ನಗರಸಭೆ ಕಚೇರಿ ಮುಂದೆ ಧರಣಿ ನಡೆಸಿದರು. ನಗರಸಭೆ ಪ್ರಭಾರ ಅಧ್ಯಕ್ಷ ಟಿ.ಎನ್.ಪ್ರಕಾಶ್, ಸ್ಥಾಯಿ ಸಮಿತಿ ಅಧ್ಯಕ್ಷ ಯೋಗೀಶ್ ಮತ್ತು ಆಯುಕ್ತ ಡಾ.ವೆಂಕಟೇಶಯ್ಯ ಪ್ರತಿಭಟನಾಕಾರರ ಅಹವಾಲು ಆಲಿಸಿದರು.