ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯು ದಿಢೀರನೆ ತೆರವು ಕಾರ್ಯಾಚರಣೆ ನಡೆಸಿರುವುದರಿಂದ ರಸ್ತೆಬದಿ ವ್ಯಾಪಾರಿಗಳು ಸಮಸ್ಯೆಗೆ ಸಿಲುಕಿದ್ದು, ಸರ್ಕಾರ ಅವರ ರಕ್ಷಣಗೆ ಧಾವಿಸಬೇಕು ಎಂದು ಕಾಂಗ್ರೆಸ್ ಸದಸ್ಯ ಆರ್.ವಿ.ವೆಂಕಟೇಶ್ ಶೂನ್ಯವೇಳೆಯಲ್ಲಿ ಪ್ರಸ್ತಾಪಿಸಿದರು. ಅದಕ್ಕೆ ಉತ್ತರಿಸಿದ ಮುಖ್ಯಮಂತ್ರಿಯವರು, ರಸ್ತೆಬದಿಯ ವ್ಯಾಪಾರಿಗಳಿಂದ ಸಂಚಾರ ದಟ್ಟಣೆ, ವಾಹನ ನಿಲುಗಡೆ ತಾಣಗಳ ಅತಿಕ್ರಮಣದಂತಹ ಸಮಸ್ಯೆಗಳಿದ್ದವು. ಅದನ್ನು ನಿವಾರಿಸುವುದಕ್ಕಾಗಿಯೇ ಕಾರ್ಯಾಚರಣೆ ನಡೆಸಿದೆ ಎಂದರು.