ಈ ಸಂದರ್ಭದಲ್ಲಿ ಸ್ಥಳೀಯರು ಮತ್ತು ಪೊಲೀಸರ ನಡುವೆ ಮಾತಿನ ಚಕಮಕಿ ನಡೆದು, ಕೆಲಕಾಲ ಸ್ಥಳದಲ್ಲಿ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿತ್ತು. ನಂತರ ಪೊಲೀಸರು ಪ್ರತಿಭಟನಾಕಾರರ ಮನವೊಲಿಸಿ, ತೆರವು ಕಾರ್ಯಾಚರಣೆಗೆ ಅನುವು ಮಾಡಿಕೊಟ್ಟರು.
‘ದೇವಾಲಯವನ್ನು ತೆರವು ಗೊಳಿಸುವಂತೆ ಈಗಾಗಲೆ ಸಂಬಂಧಪಟ್ಟವರಿಗೆ ಐದಾರು ಬಾರಿ ನೋಟಿಸ್ ಜಾರಿಗೊಳಿಸಿ, ಕಾಲಾ ವಕಾಶ ನೀಡಲಾಗಿತ್ತು. ಆದರೂ ತೆರವುಗೊಳಿಸಿಲ್ಲ. ರಾಷ್ಟ್ರೀ ಯ ಹೆದ್ದಾರಿಯ ವಿಸ್ತರಣೆ ಕಾರ್ಯ ಕೈಗೊಳ್ಳುವ ಹಿನ್ನೆಲೆಯಲ್ಲಿ ಜಿಲ್ಲಾಧಿ ಕಾರಿಗಳ ಆದೇಶದ ಮೇರೆಗೆ ತೆರವುಗೊಳಿಸಲಾಗಿದೆ’ ಎಂದು ಬೆಂಗಳೂರು ಉತ್ತರ (ಹೆಚ್ಚುವರಿ) ತಹಶೀಲ್ದಾರ್ ಬಾಳಪ್ಪ ಹಂದಿಗುಂದ ತಿಳಿಸಿದರು.
ಇದೇ ರೀತಿ ರಸ್ತೆಗೆ ಹೊಂದಿಕೊಂಡಿರುವ ಯಲಹಂಕದ ಬಾಲಾಜಿ ದೇವಸ್ಥಾನ ಹಾಗೂ ಬ್ಯಾಟರಾಯನಪುರದ ಕೋದಂಡರಾಮಸ್ವಾಮಿ ದೇವಾಲಯವನ್ನು ಶೀಘ್ರದಲ್ಲೆ ತೆರವುಗೊಳಿಸಲಾಗುವುದು ಎಂದು ಅವರು ಹೇಳಿದರು. ಬೆಂಗಳೂರು ಉತ್ತರ ಉಪವಿಭಾಗಾಧಿಕಾರಿ ಮಹೇಶ್ಬಾಬು, ಈಶಾನ್ಯ ವಿಭಾಗದ ಡಿಸಿಪಿ ಟಿ.ಆರ್.ಸುರೇಶ್ ಹಾಜರಿದ್ದರು.