ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರಸ್ತೆ ವಿಸ್ತರಣೆ ಕಾರ್ಯ ಅನಿವಾರ್ಯ: ಲಿಂಬಾವಳಿ

Last Updated 5 ಆಗಸ್ಟ್ 2013, 19:59 IST
ಅಕ್ಷರ ಗಾತ್ರ

ವೈಟ್‌ಫೀಲ್ಡ್: ಇಲ್ಲಿಗೆ ಸಮೀಪದ ವರ್ತೂರು ರಸ್ತೆ ಸಂಚಾರ ದಟ್ಟಣೆ ಕಡಿಮೆ ಮಾಡಲು ಉದ್ದೇಶಿತ ದೊಮ್ಮಸಂದ್ರ- ಹೊಸಕೋಟೆ ರಸ್ತೆ ವಿಸ್ತರಣೆ ಕಾರ್ಯ ಅನಿವಾರ್ಯ ಆಗಿದೆ ಎಂದು ಶಾಸಕ ಅರವಿಂದ ಲಿಂಬಾವಳಿ ತಿಳಿಸಿದರು.
ಶಿಥಿಲಾವಸ್ಥೆಯ ವರ್ತೂರು ಕೆರೆ ಸೇತುವೆ ಕಾಮಗಾರಿಯನ್ನು ಶನಿವಾರ ಪರಿಶೀಲನೆ ನಡೆಸಿ ಮಾತನಾಡಿದರು.

2001-2002ರಲ್ಲಿ ಲೋಕೋಪಯೋಗಿ ಇಲಾಖೆ ನಿರ್ಮಿಸಿದ್ದ ಈ ಸೇತುವೆ ಶಿಥಿಲ ಆಗಿರುವ ಕಾರಣ ನೂತನ ಸೇತುವೆ ನಿರ್ಮಾಣ ಮಾಡುವಂತೆ ಅಧಿಕಾರಿಗಳಿಗೆ ಸೂಚಿಸಿದರು. ಹೊಸೂರು ರಸ್ತೆಯ ಎಲೆಕ್ಟ್ರಾನಿಕ್ಸ್ ಸಿಟಿ-ಅಂತರರಾಷ್ಟ್ರೀಯ ವಿಮಾನ ನಿಲ್ದಾಣ ನೂತನ ರಸ್ತೆ ಯೋಜನೆಗೆ ಪ್ರಸ್ತಾವನೆ ಸಲ್ಲಿಸಿದ್ದು, ತಾತ್ವಿಕ ಒಪ್ಪಿಗೆ ದೊರಕಿದೆ. ಈ ಯೋಜನೆಗೆ 900 ಕೋಟಿ ರೂಪಾಯಿ ಅಂದಾಜು ಮಾಡಲಾಗಿದೆ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT