ಮಂಡ್ಯ: ಸಂಚಾರ ನಿಯಮಗಳು ಮತ್ತು ರಸ್ತೆ ಸುರಕ್ಷತಾ ಕ್ರಮ ಕುರಿತು ಜಾಗೃತಿಮೂಡಿಸುವ ನಿಟ್ಟಿನಲ್ಲಿ ಶುಕ್ರವಾರ ಮಂಡ್ಯದಲ್ಲಿ ಜಾಥಾ, ಜಾಗೃತಿ ಓಟ ನಡೆಯಿತು.
ರಸ್ತೆ ಸುರಕ್ಷತಾ ಸಪ್ತಾಹದ ಅಂಗವಾಗಿ ನಡೆದ ಈ ಜಾಥಾ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ಕಚೇರಿ ಬಳಿಯಿಂದ ಆರಂಭವಾಗಿದ್ದು, ಬನ್ನೂರು ರಸ್ತೆಯ ಕವಾಯತು ಮೈದಾನದ ಬಳಿ ಅಂತ್ಯವಾಯಿತು.
ಸಂಚಾರ ನಿಯಮಗಳ ಕುರಿತುಜಾಗೃತಿ ಮೂಡಿಸುವ ಭಿತ್ತಿಪತ್ರ,ಗಳನ್ನು ಹಿಡಿದಿದ್ದ ವಿದ್ಯಾರ್ಥಿನಿಯರು ನಾಗರಿಕರ ಗಮನಸೆಳೆದರು. ಸಾರ್ವಜನಿಕರಲ್ಲಿ ಸಂಚಾರ ನಿಯಮಗಳ ಬಗೆಗೆ ಅರಿವು, ಜಾಗೃತಿ ಮೂಡಿಸುವ ಕ್ರಮವಾಗಿ ಈ ಜಾಥಾ ಸಂಘಟಿಸಲಾಗಿದೆ ಎಂದು ಪೊಲೀಸ್ ವರಿಷ್ಠಾಧಿಕಾರಿ ಕೌಶಲೇಂದ್ರ ಕುಮಾರ್ ಈ ಸಂದರ್ಭ ತಿಳಿಸಿದರು.
ಜಿಲ್ಲಾಧಿಕಾರಿ ಡಾ. ಜಾಫರ್, ವಿವಿಧ ಅಧಿಕಾರಿಗಳು, ಸಂಘ ಸಂಸ್ಥೆಗಳ ಪದಾಧಿಕಾರಿಗಳು, ವಿದ್ಯಾರ್ಥಿನಿಯರು ಪಾಲ್ಗೊಂಡಿದ್ದರು.