ಗುರುವಾರ, 18 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರಸ್ತೆಗೆ ಬತ್ತ ಸುರಿದು ರೈತರ ಪ್ರತಿಭಟನೆ

Last Updated 2 ಜೂನ್ 2011, 6:20 IST
ಅಕ್ಷರ ಗಾತ್ರ

ಹೊನ್ನಾಳಿ: ಬತ್ತದ ಬೆಲೆ ಕುಸಿದಿದೆ, ರೈತ ಕಂಗಾಲಾಗಿದ್ದಾನೆ, ಕಳೆದ 20 ದಿನಗಳಿಂದ ರೈತರು ಬತ್ತಕ್ಕೆ ವೈಜ್ಞಾನಿಕ ಬೆಲೆ ನೀಡುವಂತೆ ಒತ್ತಾಯಿಸಿ ಪ್ರತಿಭಟನೆ ನಡೆಸುತ್ತಿದ್ದಾರೆ. ಆದರೆ, ಯಾರೂ ಅವರತ್ತ ತಿರುಗಿಯೂ ನೋಡುತ್ತಿಲ್ಲ  ಎಂದು ಜೆಡಿಎಸ್ ಮುಖಂಡ ಎಂ. ಶಿವಲಿಂಗಪ್ಪ ಆಕ್ರೋಶ ವ್ಯಕ್ತಪಡಿಸಿದರು.

ಬತ್ತಕ್ಕೆ ವೈಜ್ಞಾನಿಕ ಬೆಂಬಲ ಬೆಲೆ ನೀಡಬೇಕು ಎಂದು ಆಗ್ರಹಿಸಿ ಜೆಡಿಎಸ್ ವತಿಯಿಂದ ಬುಧವಾರ ಹೊನ್ನಾಳಿಯ ತಾಲ್ಲೂಕು ಕಚೇರಿ ಬಳಿ ಬತ್ತವನ್ನು ರಸ್ತೆಗೆ ಸುರಿದು ಪ್ರತಿಭಟನೆ ನಡೆಸಿದ ನಂತರ ನಡೆದ ಸಭೆಯಲ್ಲಿ ಅವರು ಮಾತನಾಡಿದರು.

ರಾಜ್ಯದ ಆಡಳಿತಾರೂಢ ಬಿಜೆಪಿ ರೈತರ ಬಗ್ಗೆ ಮೊಸಳೆ ಕಣ್ಣೀರು ಸುರಿಸುತ್ತಿದೆ, ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ರೈತರ ಮೇಲೆ ಪ್ರಮಾಣ ಮಾಡಿ ಅಧಿಕಾರ ಸ್ವೀಕರಿಸಿದ್ದಾರೆ. ಆದರೆ, ರೈತರ ಸಮಸ್ಯೆ ಬಗ್ಗೆ ಗಮನಹರಿಸುತ್ತಿಲ್ಲ ಎಂದು ಟೀಕಿಸಿದರು.

ಬಿಜೆಪಿ ನಾಯಕರು ರೆಸಾರ್ಟ್ ರಾಜಕೀಯ ಮಾಡುತ್ತಿದ್ದಾರೆ, ತಮಗೆ ಬೇಕಾದಾಗ ರಾಜ್ಯ ಸರ್ಕಾರಕ್ಕೆ ಬೆಂಬಲ ನೀಡುವುದು, ಬೇಡವಾದಾಗ ವಾಪಸ್ ಪಡೆದುಕೊಳ್ಳವುದು ಮಾಡುತ್ತಿದ್ದಾರೆ, ತಮ್ಮ ಸ್ಥಾನಗಳ ಭದ್ರತೆ, ಮಂತ್ರಿಗಿರಿಗೆ ಲಾಬಿ ಮಾಡುವುದು ಇತ್ಯಾದಿಗಳಲ್ಲೇ ಕಾಲಹರಣ ಮಾಡುತ್ತಿದ್ದಾರೆ. ರಾಜ್ಯ ಸರ್ಕಾರದ 3ನೇ ವರ್ಷಾಚರಣೆಯಲ್ಲಿ ಎಲ್ಲರೂ ಮಗ್ನರಾಗಿದ್ದಾರೆ, ರೈತರ ಸಮಸ್ಯೆಗಳ ಅರಿವು ಅವರಿಗಿಲ್ಲ ಎಂದರು.

ಬತ್ತಕ್ಕೆ ರೂ. 1,600ಗಳಷ್ಟು ಬೆಂಬಲ ಬೆಲೆ ನಿಗದಿಪಡಿಸಬೇಕು, ಹೋಬಳಿವಾರು ಖರೀದಿ ಕೇಂದ್ರ ತೆರೆಯಬೇಕು, ಎಲ್ಲಾ ಬೆಳೆಗಳಿಗೂ ಬೆಂಬಲ ಬೆಲೆ ನೀಡಬೇಕು ಎಂದು ಅವರು ಒತ್ತಾಯಿಸಿದರು.

ತಾಲ್ಲೂಕು ಜೆಡಿಎಸ್ ಅಧ್ಯಕ್ಷ ಎಂ.ಆರ್. ಮಹೇಶ್ ಇತರರು ಮಾತನಾಡಿದರು. ಬಿ.ಎಸ್. ಆನಂದ್, ಎ.ಎಸ್. ಬಸವರಾಜ್, ಎಚ್.ಬಿ. ಸೋಮಶೇಖರ್, ಪ್ರಕಾಶ್, ಮಹೇಂದ್ರ ಕುಮಾರ್ ಹೊಸಹಳ್ಳಿ, ದೇವಿಕುಮಾರ್, ಎಚ್. ನಟರಾಜ್, ಬಿ.ಜಿ. ಜಗದೀಶ್ ಇತರರು ಉಪಸ್ಥಿತರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT