ಗ್ರಾಮದ ಚಿನ್ನೇಗೌಡರ ಮಗ ಸ್ವಾಮಿ (36) ಆತ್ಮಹತ್ಯೆ ಮಾಡಿಕೊಂಡವರು. ಇವರು ರೇಷ್ಮೆ ಕೃಷಿಗಾಗಿ ಪಿಎಲ್ಡಿ ಬ್ಯಾಂಕಿನಲ್ಲಿ ರೂ. 1.24 ಲಕ್ಷ, ಬೆಳತೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದಲ್ಲಿ ರೂ. 46 ಸಾವಿರ, ವಿಜಯ ಬ್ಯಾಂಕ್ನಲ್ಲಿ ಬೆಳೆ ಸಾಲ 10 ಸಾವಿರ ರೂಪಾಯಿ ಪಡೆದಿದ್ದರು. ಇದಲ್ಲದೇ ರೇಷ್ಮೆ ಸಾಕಾಣಿಕೆ ಮನೆ ನಿರ್ಮಾಣಕ್ಕೆ ಬ್ಯಾಂಕಿನಿಂದ ಸಾಲ ತೆಗೆದುಕೊಂಡಿದ್ದರು. 3 ಲಕ್ಷ ರೂಪಾಯಿ ಖಾಸಗಿ ಸಾಲವನ್ನೂ ಮಾಡಿದ್ದರು.