ಹಾಸನ: `ರಾಜಕಾರಣ ಎಂಬುದು ನಿರಂತರವಾಗಿ ಸುಲಿಗೆ ಮಾಡುತ್ತಿರುವ ಒಂದು ಮಾಧ್ಯಮ' ಎಂದು ಸಾಹಿತಿ ಜ.ಹೋ. ನಾರಾಯಣಸ್ವಾಮಿ ನುಡಿದರು.
ತಾಲ್ಲೂಕಿನ ಗೊರೂರು ಎ.ಎನ್. ವಿ. ಪ್ರಥಮ ದರ್ಜೆ ಕಾಲೇಜಿನ ರಾಜ್ಯಶಾಸ್ತ್ರ ವಿಭಾಗದ ವತಿಯಿಂದ ಮಂಗಳವಾರ ಆಯೋಜಿಸಿದ್ದ ವಿಶೇಷ ಉಪನ್ಯಾಸ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, `ಸ್ವಾರ್ಥ ರಾಜಕೀಯದಿಂದಾಗಿ ಸಾಮಾಜಿಕ ವ್ಯವಸ್ಥೆ ಹದಗೆಡುತ್ತಿದೆ.
ರಾಜಕೀಯ ಕ್ಷೇತ್ರಕ್ಕೆ ಅಂಟಿಕೊಳ್ಳುತ್ತಿರುವ ಯುವಕರು ಉತ್ತಮ ಆದರ್ಶಗಳನ್ನು ಮೈಗೂಡಿಸಿಕೊಳ್ಳಬೇಕು' ಎಂದರು.
ಅಧ್ಯಕ್ಷತೆ ವಹಿಸಿದ್ದ ಪ್ರಾಂಶುಪಾಲ ಡಾ. ಎಂ.ಆರ್. ಚಂದ್ರಶೇಖರ್ `ರಾಜ ಕೀಯ ಕ್ಷೇತ್ರದ ಮೂಲಕ ಯುವಕರು ಸಾಮಾಜ ಕಾರ್ಯ ಚಟುವಟಿಕೆಗಳಲ್ಲಿ ತಮ್ಮನ್ನು ತೊಡಗಿಸಿಕೊಳ್ಳಬೇಕು' ಎಂದು ತಿಳಿಸಿದರು.
ಮಂಗಳಗಂಗೋತ್ರಿಯ ಸ್ನಾತಕೋ ತ್ತರ ಅಧ್ಯಯನ ಕೇಂದ್ರದ ಪ್ರಾಧ್ಯಾಪಕ ಡಾ.ಪಿ.ಎಲ್.ಧರ್ಮ, ಎ.ಎನ್.ವಿ.ವಿದ್ಯಾಸಂಸ್ಥೆಯ ಕಾರ್ಯ ದರ್ಶಿ ಎ.ಜೆ.ರಾಮನಾಥ್, ರಾಜ್ಯಶಾಸ್ತ್ರ ವಿಭಾಗದ ಮುಖ್ಯಸ್ಥ ಎಚ್.ಡಿ. ಲೋಕೇಶ್, ಉಪನ್ಯಾಸಕರಾದ ಜಯಲಕ್ಷ್ಮಿ , ಇತರರು ಇದ್ದರು.