ಶುಕ್ರವಾರ, 10 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರಾಜಕಾರಣಿಯೊಬ್ಬರ ಆಣತಿ ಮೇರೆಗೆ ಭಂವರಿ ಹತ್ಯೆ:ಸಿಬಿಐ

Last Updated 10 ಜನವರಿ 2012, 19:30 IST
ಅಕ್ಷರ ಗಾತ್ರ

ಜೈಪುರ (ಐಎಎನ್‌ಎಸ್): ನಾಪತ್ತೆಯಾಗಿದ್ದ ನರ್ಸ್ ಭಂವರಿ ದೇವಿ ಅವರನ್ನು ರಾಜಕಾರಣಿಯೊಬ್ಬರ ಆಣತಿಯಂತೆ ಹತ್ಯೆ ಮಾಡಲಾಗಿತ್ತು ಎಂದು ಸಿಬಿಐ ರಾಜಸ್ತಾನ ಹೈಕೋರ್ಟ್‌ಗೆ ಮಂಗಳವಾರ ತಿಳಿಸಿದೆ.

ಭಂವರಿ ದೇವಿಯ ಪತಿ ಅಮರ್‌ಚಾಂದ್ ಅವರು ಬಂಧನಕ್ಕೆ ಒಳಗಾಗುವುದಕ್ಕಿಂತಲೂ ಮೊದಲು, ಹೈಕೋರ್ಟ್‌ನಲ್ಲಿ ಸಲ್ಲಿಸಿದ್ದ ಹೇಬಿಯಸ್ ಕಾರ್ಪಸ್ ಅರ್ಜಿಯ ವಿಚಾರಣೆಯ ಸಂದರ್ಭದಲ್ಲಿ  ನ್ಯಾಯಾಲಯಕ್ಕೆ ಸಿಬಿಐ ಈ ವಿಚಾರವನ್ನು ದೃಢಪಡಿಸಿದೆ ಎಂದು ಸಿಬಿಐ ಮೂಲಗಳು ತಿಳಿಸಿವೆ.
 
ಅರ್ಜಿಯನ್ನು ವಜಾ ಮಾಡಬೇಕೆಂದು ಸಿಬಿಐ ಕೋರಿತು. ಆದರೆ ಇದನ್ನು ನಿರಾಕರಿಸಿದ ನ್ಯಾಯಾಲಯ ಫೆ. 21ರಂದು ಅಂತಿಮ ವರದಿ ಸಲ್ಲಿಸುವಂತೆ ಸಿಬಿಐಗೆ ಸೂಚಿಸಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT