ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರಾಜಕೀಯ ಜೀವನದ ಕೊನೆ ಹೋರಾಟ: ದೇವೇಗೌಡ

Last Updated 27 ಜನವರಿ 2012, 19:30 IST
ಅಕ್ಷರ ಗಾತ್ರ

ಮದ್ದೂರು: ಮುಂದಿನ ಚುನಾವಣೆಗೆ ಪಕ್ಷವನ್ನು ತಳಹಂತದಿಂದ ಕಟ್ಟುವ ಕೆಲಸಕ್ಕೆ ಚಾಲನೆ ನೀಡಿದ್ದು, ಇದು ತಮ್ಮ ರಾಜಕೀಯ ಜೀವನದ ಕೊನೆಯ ಹೋರಾಟ ಎಂದು ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಶುಕ್ರವಾರ ಘೋಷಿಸಿದರು.

ಶಾಸಕಿ ಕಲ್ಪನ ಸಿದ್ದರಾಜು ಅವರ ನಿವಾಸಕ್ಕೆ ಭೇಟಿ ನೀಡಿದ ಅವರು ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು. `ಮುಂದಿನ ಫೆಬ್ರುವರಿ 10ರ ನಂತರ ರಾಜ್ಯದ ಎಲ್ಲಾ 30 ಜಿಲ್ಲೆಗಳಲ್ಲೂ ಪ್ರವಾಸ ಮಾಡುತ್ತೇನೆ. ಕೇವಲ ಭಾಷಣ ಮಾಡಿ ಸಮಯ ವ್ಯರ್ಥಗೊಳಿಸದೇ ಪಕ್ಷದ ಬಲವರ್ಧನೆಗೆ ಸ್ಥಳೀಯ ಮುಖಂಡರೊಡನೆ ಚರ್ಚಿಸಿ ಅಗತ್ಯ ರೂಪುರೇಷೆಗಳನ್ನು ಸಿದ್ಧಪಡಿಸುತ್ತೇನೆ~ ಎಂದರು.

`ಬಿಜೆಪಿ ಹಾಗೂ ಕಾಂಗ್ರೆಸ್‌ನ ಆಂತರಿಕ ಬಿಕ್ಕಟ್ಟಿನ ಬಗೆಗೆ ಪ್ರತಿಕ್ರಿಯಿಸುವುದಿಲ್ಲ. ಅದು ಅವರ ಪಕ್ಷಗಳಿಗೆ ಬಿಟ್ಟ ವಿಚಾರ. ಲೋಕಾಯುಕ್ತ ಬನ್ನೂರಮಠ ಅವರ ನೇಮಕದ ವಿಚಾರ ಕುರಿತು ಏನನ್ನೂ ಹೇಳುವುದಿಲ್ಲ. ರಾಜ್ಯದ ಜನರಿಗೆ ಈ ವಿವಾದದ ಆಳ ಅಗಲದ ಪರಿಚಯವಿದೆ. ರಾಜ್ಯದಲ್ಲಿ ಬಡಜನರ ಶೋಷಣೆ ಹೆಚ್ಚುತ್ತಿರುವುದು ನನ್ನ ಮನಸ್ಸಿಗೆ ನೋವಾಗಿದೆ. ಹೀಗಾಗಿ ಈ ಇಳಿವಯಸ್ಸಿನಲ್ಲಿ ಅಂತಹ ಜನರ ಒಳಿತಿಗಾಗಿ ಕೆಲಸ ಮಾಡಲು ನಿರ್ಧರಿಸಿದ್ದೇನೆ~ ಎಂದು ತಿಳಿಸಿದರು.
 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT