ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರಾಜಕೀಯದಲ್ಲಿ ತಪ್ಪಾಗಿದೆ: ಸೋಮಣ್ಣ

Last Updated 13 ಫೆಬ್ರುವರಿ 2012, 19:30 IST
ಅಕ್ಷರ ಗಾತ್ರ

ಬೆಂಗಳೂರು:  `ಈವರೆಗೆ ರಾಜಕೀಯ ಕ್ಷೇತ್ರದಲ್ಲಿ ಹಲವು ತಪ್ಪುಗಳು ಸಂಭವಿಸಿದೆ. ಇದನ್ನು ವೀರಶೈವ ಧರ್ಮದವರು ಕ್ಷಮಿಸಿ, ಮುಂದಿನ ರಾಜಕೀಯ ಬೆಳವಣಿಗೆಗೆ ಸಹಕರಿಸಬೇಕು~ ಎಂದು ಸಚಿವ ವಿ.ಸೋಮಣ್ಣ ಕರೆ ನೀಡಿದರು.

ಲೋಕೇಶ್ವರ ಅಭಿಮಾನಿಗಳ ಬಳಗವು ನಗರದ ಚೌಡಯ್ಯ ಸ್ಮಾರಕ ಭವನದಲ್ಲಿ ಸೋಮವಾರ ಆಯೋಜಿಸಿದ್ದ ಸಿದ್ಧರಾಮೇಶ್ವರರ ಜಯಂತ್ಸುತ್ಸವ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

`ಸಿದ್ದಾರಾಮೇಶ್ವರನ್ನು ವೀರಶೈವ ಧರ್ಮ ಮಾತ್ರವಲ್ಲ ಬೋವಿ ಜನಾಂಗದವರು ಆರಾಧಿಸುತ್ತಾರೆ. ಅವರ ಜಯಂತ್ಸುತ್ಸವದಲ್ಲಿ ಎಲ್ಲಾ ಜಾತಿ, ಧರ್ಮದವರು ಭಾಗವಹಿಸುವುದು ಅವರ ವ್ಯಕ್ತಿತ್ವದ ಮಹತ್ವವನ್ನು ತಿಳಿಸುತ್ತದೆ. ಅವರ ತತ್ವಗಳನ್ನು ಪ್ರಸ್ತುತ ಸಂದರ್ಭದಲ್ಲಿ ಅಳವಡಿಸಿಕೊಳ್ಳುವ ಅಗತ್ಯವಿದೆ~ ಎಂದು ಹೇಳಿದರು.

ತಿಪಟೂರಿನ ಗುರುಪರದೇಶಿಕೇಂದ್ರ ಸ್ವಾಮೀಜಿ ಮತ್ತು ಪೊಲೀಸ್ ಅಧಿಕಾರಿ ಲೋಕೇಶ್ವರ ಅವರನ್ನು ಸನ್ಮಾನಿಸಲಾಯಿತು. ಶಾಸಕ ಪುಟ್ಟೇಗೌಡ, ವಿಧಾನ ಪರಿಷತ್ ಸದಸ್ಯ ವೀರಣ್ಣ ಮತ್ತಿಕಟ್ಟಿ ಇತರರು ಉಪಸ್ಥಿತರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT