ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರಾಜೀನಾಮೆ ವದಂತಿ: ಅಜಿತ್ ಸ್ಪಷ್ಟನೆ

Last Updated 12 ಏಪ್ರಿಲ್ 2013, 19:59 IST
ಅಕ್ಷರ ಗಾತ್ರ

ಸತಾರಾ(ಮಹಾರಾಷ್ಟ್ರ)(ಪಿಟಿಐ):`ನನ್ನ ರಾಜೀನಾಮೆ ವಿಷಯದಲ್ಲಿ ಪಕ್ಷದ ಶಾಸಕರೊಂದಿಗೆ ಚರ್ಚಿಸಿ ನಿರ್ಣಯ ತೆಗೆದುಕೊಳ್ಳುತ್ತೇನೆ' ಎಂದು ಮಹಾರಾಷ್ಟ್ರ ಉಪ ಮುಖ್ಯಮಂತ್ರಿ ಅಜಿತ್ ಪವಾರ್ ಸ್ಪಷ್ಟಪಡಿಸಿದ್ದಾರೆ.

ಬರ ಪರಿಸ್ಥಿತಿ ಕುರಿತಂತೆ ಪವಾರ್ ನೀಡಿದ್ದ ವಿವಾದಾತ್ಮಕ ಹೇಳಿಕೆ ಹಿನ್ನೆಲೆಯಲ್ಲಿ ಅವರ ರಾಜೀನಾಮೆಯ ವದಂತಿ ಕೇಳಿಬಂದಿತ್ತು.

`ಕಳೆದ ಬಾರಿ ರಾಜೀನಾಮೆ ನೀಡಿದ್ದು ವ್ಯಕ್ತಿಗತ ನಿರ್ಧಾರ. ಈ ಬಾರಿ ಪಕ್ಷದ ಎಲ್ಲ ಶಾಸಕರ ಜೊತೆ ಚರ್ಚಿಸಿ ನಿರ್ಧಾರ ಪ್ರಕಟಿಸುತ್ತೇನೆ' ಎಂದು ಸುದ್ದಿಗಾರರಿಗೆ ತಿಳಿಸಿದರು.

`ಜಲಾಶಯಗಳಲ್ಲಿ ನೀರಿಲ್ಲದಿದ್ದರೆ ನಾವು ಅಲ್ಲಿ ಹೋಗಿ ಮೂತ್ರ ವಿಸರ್ಜನೆ ಮಾಡಬೇಕೆ' ಎಂದು ಪವಾರ್ ವಿವಾದಾತ್ಮಕ ಹೇಳಿಕೆ ನೀಡಿದ್ದರು. ಈ ಸಂಬಂಧ ಪವಾರ್ ರಾಜೀನಾಮೆಗೆ ವಿರೋಧ ಪಕ್ಷಗಳಾದ ಬಿಜೆಪಿ ಹಾಗೂ ಶಿವಸೇನೆ ಪಟ್ಟು ಹಿಡಿದಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT