ತಿರುವನಂತಪುರ (ಪಿಟಿಐ): ಭೂಮಿ ಹಂಚಿಕೆ ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ಜಾಗೃತ ಮತ್ತು ಭ್ರಷ್ಟಾಚಾರ ನಿಗ್ರಹ ವಿಭಾಗವು ಪ್ರಥಮ ಮಾಹಿತಿ ವರದಿ ಸಲ್ಲಿಸಲು ಸಿದ್ಧತೆ ನಡೆಸುತ್ತಿರುವ ಹಿನ್ನೆಲೆಯಲ್ಲಿ ಸಿಪಿಐ ಮುಖಂಡ ವಿ. ಎಸ್. ಅಚ್ಚುತಾನಂದನ್ ಕೇರಳ ವಿಧಾನಸಭೆಯ ವಿರೋಧಪಕ್ಷದ ನಾಯಕ ಸ್ಥಾನಕ್ಕೆ ರಾಜೀನಾಮೆ ನೀಡಲು ಮುಂದಾಗಿದ್ದಾರೆ. ಆದರೆ ಪಕ್ಷದ ರಾಷ್ಟ್ರೀಯ ವರಿಷ್ಠರು ಇದಕ್ಕೆ ಒಪ್ಪಿಗೆ ನೀಡಿಲ್ಲ.