ಕ್ರೀಡಾಕೂಟಕ್ಕೆ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವ ವಿ.ಎಸ್. ಆಚಾರ್ಯ ಚಾಲನೆ ನೀಡಿದರು.
ಉಡುಪಿ ಜಿಲ್ಲೆಯಲ್ಲಿ ಮೊದಲ ಬಾರಿಗೆ ನಡೆಯುತ್ತಿರುವ ಈ ಕೂಟದಲ್ಲಿ ದಕ್ಷಿಣ ಕನ್ನಡ, ಚಿಕ್ಕಮಗಳೂರು, ಬೆಂಗಳೂರು, ಎಂಇಜಿ, ಭಾರತ ಕ್ರೀಡಾ ಪ್ರಾಧಿಕಾರ, ಕೊಡಗು, ಮೈಸೂರು, ಬಾಗಲಕೋಟೆ, ಶಿವಮೊಗ್ಗ, ವಿಜಾಪುರ, ಉಡುಪಿ ಸೇರಿದಂತೆ ವಿವಿಧ ಜಿಲ್ಲೆಗಳ ಸುಮಾರು 1,500 ಕ್ರೀಡಾಪಟುಗಳು ಪಾಲ್ಗೊಳ್ಳುತ್ತಿದ್ದಾರೆ.
ಶುಕ್ರವಾರದಿಂದ ಮೂರು ದಿನ- ಒಟ್ಟು ನಾಲ್ಕು (14, 16, 18 ಮತ್ತು 20) ವಯೋವರ್ಗಗಳ ಬಾಲಕರು ಮತ್ತು ಬಾಲಕಿಯರ ವಿಭಾಗದಲ್ಲಿ ಹಾಗೂ ಪುರುಷರ ಮತ್ತು ಮಹಿಳೆಯರ ವಿಭಾಗದಲ್ಲಿ 240 ಸ್ಪರ್ಧೆಗಳು ನಡೆಯಲಿವೆ. ಈ ಕೂಟದ ನಂತರ ನವೆಂಬರ್ 1ರಿಂದ 4ರವರೆಗೆ ರಾಂಚಿಯಲ್ಲಿ ನಡೆಯುವ ರಾಷ್ಟ್ರೀಯ ಮಟ್ಟದ ಅಥ್ಲೆಟಿಕ್ ಕೂಟಕ್ಕೆ ಕರ್ನಾಟಕ ತಂಡಗಳ ಆಯ್ಕೆ ನಡೆಯಲಿದೆ.