ಬುಧವಾರ, 1 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರಾಜ್ಯ ಬಂದ್‌ಗೆ ಬೆಂಬಲ

Last Updated 5 ಅಕ್ಟೋಬರ್ 2012, 19:10 IST
ಅಕ್ಷರ ಗಾತ್ರ

ಬೆಂಗಳೂರು : `ಕಾವೇರಿ ನದಿ ನೀರಿನ ಹೋರಾಟಕ್ಕೆ ಸಂಬಂಧಿಸಿದಂತೆ ಕನ್ನಡಪರ ಸಂಘಟನೆಗಳು (ಅ.6) ಶನಿವಾರ ಕರ್ನಾಟಕ ಬಂದ್‌ಗೆ ಸಂಘವು ಸಂಪೂರ್ಣವಾದ ಬೆಂಬಲವನ್ನು ನೀಡಲಾಗುವುದು~ ಎಂದು ಅಖಿಲ ಕರ್ನಾಟಕ ಎಚ್.ಡಿ.ಕುಮಾರಸ್ವಾಮಿ ಅಭಿಮಾನಿಗಳ ಸಂಘದ ರಾಜ್ಯ ಪ್ರಧಾನ ಕಾರ್ಯದರ್ಶಿ ಕೆ.ಎಸ್.ಲವಕುಮಾರ್ ತಿಳಿಸಿದರು.

ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, `ರಾಜ್ಯ ಬಿಜೆಪಿ ಸರ್ಕಾರ ಕಾವೇರಿ ನದಿ ಪ್ರಾಧಿಕಾರಕ್ಕೆ ಸರಿಯಾದ ಮಾಹಿತಿ ನೀಡುವಲ್ಲಿ ವಿಫಲವಾಗಿದೆ. ಇದರಿಂದ ನಾಡಿನ ಬೆಳೆಗಳಿಗೆ ಮತ್ತು ಕುಡಿಯುವ ನೀರಿಗೆ ಮುಂದಿನ ದಿನಗಳಲ್ಲಿ ಭೀಕರ ಪರಿಸ್ಥಿತಿ ಎದುರಿಸುವುದು ಅನಿವಾರ್ಯವಾಗುತ್ತದೆ. ಇದು  ರಾಜ್ಯದ ಜನತೆಗೆ ಆಗಿರುವ ದ್ರೋಹ~ ಎಂದರು.

ಸಂಘದ ಅಧ್ಯಕ್ಷ ಎಂ.ಬಿ.ನಾಗೇಶ್‌ಸಂಘದ ಗೌರವ ಅಧ್ಯಕ್ಷ ರೇಣುಕುಮಾರ್, ಉಪಾಧ್ಯಕ್ಷ ರಘುನಾಥ್ ರೈ ಕುಂಬ್ರ, ಸಂಘಟನಾ ಕಾರ್ಯದರ್ಶಿ ವಿ.ಮಣಿ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT