ಈ ಮಧ್ಯೆ, ರಾಜ್ಯ ಸರ್ಕಾರದ ವಿರುದ್ಧ ಪ್ರದೇಶ ಕಾಂಗ್ರೆಸ್ ಸಮಿತಿ ಹಮ್ಮಿಕೊಂಡಿದ್ದ ‘ಕೇರಳ ವಿಮೋಚನಾ’ ಯಾತ್ರೆಯು ಪೆರಿಂತಲ್ಮಣ್ನಲ್ಲಿ ಮಂಗಳವಾರ ಆರಂಭವಾಗಲಿದೆ. ದುರಂತದ ಕಾರಣ ರಾಜ್ಯ ಸರ್ಕಾರ ಮೂರು ದಿನಗಳ ಕಾಲ ರಾಜ್ಯದಲ್ಲಿ ಶೋಕಾಚಾರಣೆ ಘೋಷಿಸಿದ್ದರಿಂದ ಈ ಯಾತ್ರೆಯನ್ನು ಮುಂದೂಡಲಾಗಿತ್ತು. ರಾಜ್ಯ ಸರ್ಕಾರದ ವಿರುದ್ಧ ಕ್ರಮ ಕೈಗೊಳ್ಳುವಂತೆ ರಾಜ್ಯಪಾಲ ಆರ್.ಎಸ್.ಗವಾಯ್ ಅವರಿಗೆ ಫೆ. 7ರಂದು ಮನವಿ ಸಲ್ಲಿಸಲಾಗುವುದು ಎಂದು ಚಾಂಡಿ ತಿಳಿಸಿದ್ದಾರೆ.