ಬೆಂಗಳೂರು: ಗುರುವಾರ ಬೆಳಿಗ್ಗೆ 8.30 ಕ್ಕೆ ಕೊನೆಗೊಂಡಂತೆ ಕಳೆದ 24 ಗಂಟೆಗಳಲ್ಲಿ ರಾಜ್ಯದಲ್ಲಿ ಮುಂಗಾರು ಕ್ಷೀಣಿಸಿದೆ. ರಾಜ್ಯದ ಕರಾವಳಿ ಮತ್ತು ರಾಜ್ಯದ ಒಳನಾಡಿನಲ್ಲಿ ಮಳೆಯಾಗಿದೆ.
ಆಗುಂಬೆಯಲ್ಲಿ 8 ಸೆಂ.ಮೀ ಮಳೆಯಾಗಿದೆ. ಕಾರ್ಕಳ 5, ಕೋಟ, ಕೊಪ್ಪ 4, ಕುಂದಾಪುರ, ಸಿದ್ದಾಪುರ (ಉಡುಪಿ ಜಿಲ್ಲೆ), ಗೇರುಸೊಪ್ಪ, ಶೃಂಗೇರಿ, ಕೊಟ್ಟಿಗೆಹಾರ, ಚಿಕ್ಕಮಗಳೂರು 3, ಮೂಡಬಿದಿರೆ, ಬಂಟ್ವಾಳ, ಬೆಳ್ತಂಗಡಿ, ಧರ್ಮಸ್ಥಳ, ಪುತ್ತೂರು, ಸುಬ್ರಹ್ಮಣ್ಯ, ಉಡುಪಿ, ಕೊಲ್ಲೂರು, ಶಿರಾಲಿ, ಗುರುಮಿಟ್ಕಲ್, ಲಿಂಗನಮಕ್ಕಿ, ಕಳಸ, ಸಕಲೇಶಪುರ 2, ಮಂಗಳೂರು, ಮಾಣಿ, ಭಟ್ಕಳ, ಗೋಕರ್ಣ, ಕುಮಟಾ, ಕದ್ರಾ, ಶಿರಸಿ, ಯಲ್ಲಾಪುರ, ಹೊನ್ನಾವರ, ಸಂಕೇಶ್ವರ, ಜೇವರ್ಗಿ, ಭಾಗಮಂಡಲ, ತಾಳಗುಪ್ಪ, ಹೊಸನಗರ, ಹುಂಚದಕಟ್ಟೆ, ತೀರ್ಥಹಳ್ಳಿ, ಜಯಪುರ, ಕಮ್ಮರಡಿ, ಬಾಳೆಹೊನ್ನೂರು, ಆಲೂರು, ಹಾಸನದಲ್ಲಿ 1 ಸೆಂ.ಮೀ ಮಳೆಯಾಗಿದೆ.
ಮುನ್ಸೂಚನೆ: ಮುಂದಿನ 48 ಗಂಟೆಗಳ ಕಾಲ ರಾಜ್ಯದ ಕರಾವಳಿ ಹಾಗೂ ದಕ್ಷಿಣ ಒಳನಾಡಿನ ಘಟ್ಟ ಪ್ರದೇಶಗಳಲ್ಲಿ ಅತಿ ಹೆಚ್ಚು ಮಳೆಯಾಗಲಿದೆ. ರಾಜ್ಯದ ಉತ್ತರ ಒಳನಾಡು ಮತ್ತು ದಕ್ಷಿಣ ಒಳನಾಡಿನ ಕೆಲವು ಪ್ರದೇಶಗಳಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.