ಬೆಂಗಳೂರು: ರಾಜ್ಯದ ಒಳನಾಡಿನಲ್ಲಿ ಮುಂಗಾರು ಕ್ಷೀಣಿಸಿದೆ. ಶುಕ್ರವಾರ ಬೆಳಿಗ್ಗೆ 8.30ಕ್ಕೆ ಕೊನೆಗೊಂಡಂತೆ ಕಳೆದ 24 ಗಂಟೆಗಳಲ್ಲಿ ರಾಜ್ಯದ ಕರಾವಳಿ ಮತ್ತು ರಾಜ್ಯದ ಒಳನಾಡಿನಲ್ಲಿ ಮಳೆಯಾಗಿದೆ. ಕುಂದಾಪುರದಲ್ಲಿ 4 ಸೆಂ.ಮೀ ಮಳೆಯಾಗಿದೆ.
ಕೋಟ, ಹೊನ್ನಾವರ 3, ಭಟ್ಕಳ, ಮಂಕಿ, ಕುಮಟಾ, ಗೇರುಸೊಪ್ಪ, ಅಂಕೋಲಾ, ಕದ್ರಾ, ಮಂಗಳೂರು ವಿಮಾನ ನಿಲ್ದಾಣ, ಆಗುಂಬೆ, ಕೊಟ್ಟಿಗೆಹಾರ 2, ಸೆಂ.ಮೀ ಮಳೆಯಾಗಿದೆ.
ಮುನ್ಸೂಚನೆ: ಮುಂದಿನ 48 ಗಂಟೆಗಳ ಕಾಲ ರಾಜ್ಯದ ಕರಾವಳಿ, ಒಳನಾಡಿನಲ್ಲಿ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಸೂಚನೆ ನೀಡಿದೆ.