‘ಕೆಲವೊಂದು ಸಂದರ್ಭಗಳಲ್ಲಿ ಒತ್ತಡಕ್ಕೆ ಮಣಿದೋ ಇನ್ನಾವುದೋ ಕಾರಣಕ್ಕೆ ಕಾನೂನು ಮೀರಿದ ನಿರ್ಣಯವನ್ನು ಮಂತ್ರಿ ಮಂಡಲ ನೀಡುವುದು ಇದೆ. ಆಗ ರಾಜ್ಯಪಾಲರು ಇದಕ್ಕೆ ಅಸಮ್ಮತಿ ವ್ಯಕ್ತಪಡಿಸಬಹುದು. ಇಲ್ಲದೇ ಹೋದರೆ ಸಂವಿಧಾನದ ಸಂಪೂರ್ಣ ಆಶಯವೇ ಬುಡಮೇಲಾಗುತ್ತದೆ. ಇದರಿಂದಾಗಿ ಅಧಿಕಾರದಲ್ಲಿ ಇರುವವರು ತಾವು ಏನು ಮಾಡಿದರೂ ನಡೆಯುತ್ತದೆ ಎಂಬ ದೃಷ್ಟಿಯಿಂದ ಕಾನೂನನ್ನು ಉಲ್ಲಂಘನೆ ಮಾಡುವಲ್ಲಿ ಮುಂದಾಗುತ್ತಾರೆ’ ಎಂದು ನ್ಯಾಯಮೂರ್ತಿಗಳು ತೀರ್ಪಿನಲ್ಲಿ ಉಲ್ಲೇಖಿಸಿದ್ದಾರೆ.