ನವದೆಹಲಿ (ಐಎಎನ್ಎಸ್): ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷೆಯ `ಭೂಸ್ವಾಧೀನ ಮತ್ತು ಪುನರ್ವಸತಿ ಮಸೂದೆ' ಬುಧವಾರ ರಾಜ್ಯಸಭೆಯಲ್ಲಿ ಚರ್ಚೆಗೆ ಬರಲಿದೆ.
ಆ.29ರಂದು ಲೋಕಸಭೆಯಲ್ಲಿ ಅಂಗೀಕಾರವಾಗಿರುವ ಈ ಮಸೂದೆಗೆ `ಭೂಸ್ವಾಧಿನ ಮತ್ತು ಪುನರ್ವಸತಿಯಲ್ಲಿ ನ್ಯಾಯಬದ್ಧ ಪರಿಹಾರ ಮತ್ತು ಪಾರದರ್ಶಕತೆ ಮಸೂದೆ-2012' ಎಂದು ಮರು ನಾಮಕರಣ ಮಾಡಲಾಗಿದೆ. ಲೋಕಸಭೆಯಲ್ಲಿ ಮಸೂದೆ ಪರ 216 ಮತ್ತು ವಿರುದ್ಧವಾಗಿ 19 ಮತಗಳು ಚಲಾವಣೆಯಾಗಿವೆ.