ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರಾಮಾಯಣ ನಮಗೆ ದಾರಿದೀಪ

Last Updated 12 ಅಕ್ಟೋಬರ್ 2011, 6:20 IST
ಅಕ್ಷರ ಗಾತ್ರ

ಶಿವಮೊಗ್ಗ: ವಾಲ್ಮೀಕಿ ವಿರಚಿತ ರಾಮಾಯಣ ನಮಗೆಲ್ಲ ದಾರಿದೀಪ. ನಮ್ಮ ದೇಶಕ್ಕೊಂದು ಉನ್ನತ ಕೊಡುಗೆ ಎಂದು ಜ್ಞಾನದೀಪ ಶಾಲೆ ಪ್ರಾಂಶುಪಾಲ ಶ್ರೀಕಾಂತ್ ಎಂ. ಹೆಗಡೆ ಹೇಳಿದರು.

ನಗರದ ಹೊರವಲಯದ ಜಾವಳ್ಳಿಯ ಜ್ಞಾನದೀಪ ಶಾಲೆಯಲ್ಲಿ ಮಂಗಳವಾರ ಹಮ್ಮಿಕೊಂಡಿದ್ದ `ವಾಲ್ಮೀಕಿ ಮಹರ್ಷಿ ಜಯಂತಿ~ ಕಾರ್ಯಕ್ರಮದಲ್ಲಿ ವಾಲ್ಮೀಕಿಮಹರ್ಷಿ ಭಾವಚಿತ್ರಕ್ಕೆ ಪುಷ್ಪ ಅರ್ಪಿಸಿ ಅವರು ಮಾತನಾಡಿದರು.

ಶಿಕ್ಷಕ ಶ್ರೀಧರ್‌ಭಟ್ ಮಾತನಾಡಿ, ವಾಲ್ಮೀಕಿ ಮಹರ್ಷಿಗಳ ಜೀವನ ಸಾಧನೆ ವಿದ್ಯಾರ್ಥಿಗಳಿಗೆ ಮಾದರಿಯಾಗಬೇಕು ಎಂದರು.

 ಶಾಲೆಯ ಉಪ ಪ್ರಾಂಶುಪಾಲ ರಿಜಿ ಜೋಸೆಫ್, ಮುಖ್ಯೋಪಾಧ್ಯಾಯಿನಿ ವಾಣಿ ಕೃಷ್ಣಪ್ರಸಾದ್, ಸಂಪನ್ಮೂಲ ವ್ಯಕ್ತಿಗಳಾದ  ರಾಮಕುಮಾರ್, ಅರಬಿಂದೋ ಕಾಲೇಜಿನ ಪ್ರಾಂಶುಪಾಲ ಕೆ. ನಾಗರಾಜ್ ಮತ್ತಿತರರು ಉಪಸ್ಥಿತರಿದ್ದರು.
ಇದೇ ಸಂದರ್ಭದಲ್ಲಿ ವಿದ್ಯಾರ್ಥಿಗಳಿಂದ `ವಾಲ್ಮೀಕಿ ಮಹರ್ಷಿ ಜನ್ಮ ವೃತ್ತಾಂತ~ದ ನೃತ್ಯರೂಪಕ ನಡೆಯಿತು.

 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT