ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರಾಷ್ಟ್ರಪತಿ ಭೇಟಿ: ತೆಲಂಗಾಣ ರಾಜ್ಯ ರಚನೆಗೆ ಆಗ್ರಹ

Last Updated 23 ಮಾರ್ಚ್ 2011, 19:30 IST
ಅಕ್ಷರ ಗಾತ್ರ

ನವದೆಹಲಿ (ಪಿಟಿಐ):ಆಂಧ್ರಪ್ರದೇಶದ ತೆಲಂಗಾಣ ಭಾಗದ ಶಾಸಕರು ಮತ್ತು ತೆಲುಗು ದೇಶಂ ಪಕ್ಷದ ನಾಯಕರನ್ನು ಒಳಗೊಂಡ ನಿಯೋಗವು ಬುಧವಾರ ರಾಷ್ಟ್ರಪತಿ ಪ್ರತಿಭಾ ಪಾಟೀಲ್ ಅವರನ್ನು ಭೇಟಿ ಮಾಡಿ ಪ್ರತ್ಯೇಕ ತೆಲಂಗಾಣ ರಾಜ್ಯ ರಚನೆಗೆ ಕೂಡಲೇ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.

ರಾಷ್ಟ್ರಪತಿ ಭವನದಲ್ಲಿ ಪ್ರತಿಭಾ ಪಾಟೀಲ್ ಅವರನ್ನು  ಭೇಟಿ ಮಾಡಿದ ನಾಗಂ ಜನಾರ್ದನ ರೆಡ್ಡಿ ನೇತೃತ್ವದ ನಿಯೋಗವು ತೆಲಂಗಾಣ ಪರಿಸ್ಥಿತಿ ಬಗ್ಗೆ ಮನವರಿಕೆ ಮಾಡಿಕೊಟ್ಟಿತು. ಗೃಹ ಸಚಿವ ಪಿ. ಚಿದಂಬರಂ ಅವರು ನೀಡಿದ ಹೇಳಿಕೆಯ ಪ್ರಕಾರ ಕೇಂದ್ರ ಸರ್ಕಾರ ಪ್ರತ್ಯೇಕ ತೆಲಂಗಾಣ ರಾಜ್ಯ ರಚನೆಗೆ ಕ್ರಮ ಕೈಗೊಳ್ಳಬೇಕು ಎಂದು ಮನವಿ ಮಾಡಿದ್ದಾಗಿ ನಿಯೋಗದ ನಾಯಕರು ಹೇಳಿದರು. 2 ವರ್ಷಗಳ ಹಿಂದೆ  ರಾಷ್ಟ್ರಪತಿ ಅವರು ಮಾಡಿದ ಭಾಷಣದಲ್ಲೂ ಈ ವಿಷಯದ ಪ್ರಸ್ತಾವ ಇದೆ ಎಂಬುದನ್ನು ನಿಯೋಗವು ಗಮನಕ್ಕೆ ತಂದಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT