`ಈಗಾಗಲೇ ರಾಜಸ್ಥಾನ ಮತ್ತು ಪಂಜಾಬ್ ರಾಜ್ಯಗಳಲ್ಲಿ ಈ ನೀತಿಗೆ ವ್ಯಾಪಕ ವಿರೋಧ ವ್ಯಕ್ತವಾಗಿದೆ. ಸರ್ಕಾರ, ಖಾಸಗಿ ಕಂಪೆನಿಗಳ ಜತೆ ಕೈ ಜೋಡಿಸಿ ಅಂತರ್ಜಲ ಸೇರಿದಂತೆ ನೀರಿನ ಮೂಲಗಳನ್ನು ಲೂಟಿ ಮಾಡಲು ಹೊರಟಿದೆ. ಹನಿ ನೀರಿಗೂ ಬೆಲೆ ಕಟ್ಟಿ ದಲ್ಲಾಳಿಯಂತೆ ವರ್ತಿಸುತ್ತಿರುವ ಸರ್ಕಾರ, ಈಗಾಗಲೇ ಮೈಸೂರು, ಗುಲ್ಬರ್ಗ, ಬೆಳಗಾವಿ ಸೇರಿದಂತೆ ಹಲವು ನಗರಗಳಲ್ಲಿ ಈ ನೀತಿಯನ್ನು ಜಾರಿಗೆ ತಂದಿದೆ. ಅಲ್ಲದೇ, ಮುಂದಿನ ದಿನಗಳಲ್ಲಿ ಈ ನೀತಿಯನ್ನು ದೇಶವ್ಯಾಪಿಗೊಳಿಸುವುದಾಗಿ ಪಣ ತೊಟ್ಟಿದೆ. ಇದಕ್ಕೆ ನಾವು ಅವಕಾಶ ಮಾಡಿಕೊಡುವುದಿಲ್ಲ~ ಎಂದು ಪ್ರತಿಭಟನಾಕಾರರು ಎಚ್ಚರಿಕೆ ನೀಡಿದ್ದಾರೆ.