ರಾಷ್ಟ್ರೀಯ ಹೆದ್ದಾರಿ 4ನ್ನು ಚತುಷ್ಪಥ ಮಾರ್ಗವನ್ನಾಗಿ ಪರಿವರ್ತಿಸುವ ಸಂದರ್ಭದಲ್ಲಿ ನೂರಾರು ವರ್ಷಗಳಷ್ಟು ಹಳೆಯ, ಸಾವಿರಾರು ಮರಗಳನ್ನು ಕಡಿದುರುಳಿಸಲಾಗಿತ್ತು. ರಸ್ತೆ ನಿರ್ಮಾಣವಾಗುತ್ತಿದ್ದಂತೆಯೇ ಇಕ್ಕೆಲಗಳಲ್ಲಿ ಮರಗಳನ್ನು ಬೆಳೆಸುವುದಾಗಿ ಸಂಬಂಧಿಸಿದ ಇಲಾಖೆಯವರು ಜನಸಂಪರ್ಕ ಸಭೆಗಳಲ್ಲಿ ಭರವಸೆ ನೀಡಿದ್ದರು.