ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರೆಡ್ಡಿ ಸಹಚರರ ಮನೆ ಮೇಲೆ ಸಿಬಿಐ ದಾಳಿ

Last Updated 19 ಸೆಪ್ಟೆಂಬರ್ 2011, 8:20 IST
ಅಕ್ಷರ ಗಾತ್ರ

ಬಳ್ಳಾರಿ, (ಪಿಟಿಐ): ಅಕ್ರಮ ಗಣಿಗಾರಿಕೆ ಪ್ರಕರಣಗಳಿಗೆ ಸಂಬಂಧಿಸಿದಂತೆ ಬಂಧಿತ ಮಾಜಿ ಸಚಿವ ಜನಾರ್ದನ ರೆಡ್ಡಿ ಅವರ ಇಬ್ಬರು ಸಹಚರರ ಮನೆಗಳ ಮೇಲೆ ಸಿಬಿಐ  ಸೋಮವಾರ ಬೆಳಿಗ್ಗೆ ದಾಳಿ ನಡೆಸಿ, ದಾಖಲೆಗಳಿಗಾಗಿ ಹುಡುಕಾಟ ನಡೆಸಿದೆ.

ರೆಡ್ಡಿ ಅವರ ಸಹಚರರಾದ ಸರಕು ಸಾಗಣೆಕೆದಾರರಾದ ಖಾರಾಪುಡಿ ಮಹೇಶ್ ಮತ್ತು ಸ್ವಸ್ತಿಕ್ ನಾಗರಾಜ್ ಅವರ ಮನೆಗಳ ಮೇಲೆ ಬೆಳಿಗ್ಗೆಯೇ ದಾಳಿ ನಡೆಸಿದ ಸಿಬಿಐ ತಂಡಗಳು ಈ ದಾಳಿಗಳಲ್ಲಿ ಅಕ್ರಮ ಗಣಿಗಾರಿಕೆಯ ಬಗ್ಗೆ ಮತ್ತಷ್ಟು ಮಾಹಿತಿ ಲಭ್ಯವಾಗಲಿದೆ ಎನ್ನಲಾಗಿದೆ.

ರೆಡ್ಡಿ ಅವರ ಸಹಚರರಾದ ಖಾರಾಪುಡಿ ಮಹೇಶ್ ಮತ್ತು ಸ್ವಸ್ತಿಕ್ ನಾಗರಾಜ್ ಅವರು ಪ್ರಕರಣ ಬೆಳಕಿಗೆ ಬರುತ್ತಿದ್ದಂತೆಯೇ ನಾಪತ್ತೆಯಾಗಿದ್ದಾರೆ.

ಅಕ್ರಮ ಗಣಿಗಾರಿಕೆಯ ಆರೋಪದ ಮೇಲೆ ಈ ತಿಂಗಳು ಮೊದಲ ವಾರದಲ್ಲಿ ಸೆ 5 ರಂದು ಮಾಜಿ ಸಚಿವ ಜನಾರ್ದನ ರೆಡ್ಡಿ ಮತ್ತು ಅವರ ಭಾವ ಓಬಳಾಪುರಂ ಗಣಿ ಸಂಸ್ಥೆಯ ಆಡಳಿತ ನಿರ್ದೇಶಕ ಬಿ.ವಿ.ಶ್ರೀನಿವಾಸ ರೆಡ್ಡಿ ಅವರನ್ನು ಸಿಬಿಐ ಬಂಧಿಸಿತ್ತು. ಅಂದಿನಿಂದ ಇಂದಿನವರೆಗೂ ಅವರು ನ್ಯಾಯಾಂಗದ ಬಂಧನದಲ್ಲಿದ್ದಾರೆ. 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT