ಬಳ್ಳಾರಿ, (ಪಿಟಿಐ): ಅಕ್ರಮ ಗಣಿಗಾರಿಕೆ ಪ್ರಕರಣಗಳಿಗೆ ಸಂಬಂಧಿಸಿದಂತೆ ಬಂಧಿತ ಮಾಜಿ ಸಚಿವ ಜನಾರ್ದನ ರೆಡ್ಡಿ ಅವರ ಇಬ್ಬರು ಸಹಚರರ ಮನೆಗಳ ಮೇಲೆ ಸಿಬಿಐ ಸೋಮವಾರ ಬೆಳಿಗ್ಗೆ ದಾಳಿ ನಡೆಸಿ, ದಾಖಲೆಗಳಿಗಾಗಿ ಹುಡುಕಾಟ ನಡೆಸಿದೆ.
ರೆಡ್ಡಿ ಅವರ ಸಹಚರರಾದ ಸರಕು ಸಾಗಣೆಕೆದಾರರಾದ ಖಾರಾಪುಡಿ ಮಹೇಶ್ ಮತ್ತು ಸ್ವಸ್ತಿಕ್ ನಾಗರಾಜ್ ಅವರ ಮನೆಗಳ ಮೇಲೆ ಬೆಳಿಗ್ಗೆಯೇ ದಾಳಿ ನಡೆಸಿದ ಸಿಬಿಐ ತಂಡಗಳು ಈ ದಾಳಿಗಳಲ್ಲಿ ಅಕ್ರಮ ಗಣಿಗಾರಿಕೆಯ ಬಗ್ಗೆ ಮತ್ತಷ್ಟು ಮಾಹಿತಿ ಲಭ್ಯವಾಗಲಿದೆ ಎನ್ನಲಾಗಿದೆ.
ರೆಡ್ಡಿ ಅವರ ಸಹಚರರಾದ ಖಾರಾಪುಡಿ ಮಹೇಶ್ ಮತ್ತು ಸ್ವಸ್ತಿಕ್ ನಾಗರಾಜ್ ಅವರು ಪ್ರಕರಣ ಬೆಳಕಿಗೆ ಬರುತ್ತಿದ್ದಂತೆಯೇ ನಾಪತ್ತೆಯಾಗಿದ್ದಾರೆ.
ಅಕ್ರಮ ಗಣಿಗಾರಿಕೆಯ ಆರೋಪದ ಮೇಲೆ ಈ ತಿಂಗಳು ಮೊದಲ ವಾರದಲ್ಲಿ ಸೆ 5 ರಂದು ಮಾಜಿ ಸಚಿವ ಜನಾರ್ದನ ರೆಡ್ಡಿ ಮತ್ತು ಅವರ ಭಾವ ಓಬಳಾಪುರಂ ಗಣಿ ಸಂಸ್ಥೆಯ ಆಡಳಿತ ನಿರ್ದೇಶಕ ಬಿ.ವಿ.ಶ್ರೀನಿವಾಸ ರೆಡ್ಡಿ ಅವರನ್ನು ಸಿಬಿಐ ಬಂಧಿಸಿತ್ತು. ಅಂದಿನಿಂದ ಇಂದಿನವರೆಗೂ ಅವರು ನ್ಯಾಯಾಂಗದ ಬಂಧನದಲ್ಲಿದ್ದಾರೆ.