ಶುಕ್ರವಾರ, 10 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರೆಸಾರ್ಟ್ ರಾಜಕೀಯ: ಸಚಿವ ಅಸ್ನೋಟಿಕರ ಬೆದರಿಕೆ

Last Updated 18 ಮೇ 2012, 19:30 IST
ಅಕ್ಷರ ಗಾತ್ರ

ಕಾರವಾರ:`ಉಸಿರುಗಟ್ಟಿಸುವ ವಾತಾವರಣ ತಿಳಿಯಾಗಬೇಕು. ಜೂ. 15ರೊಳಗೆ ಸಂಪುಟ ಪುನರ‌್ರಚಿಸಬೇಕು ಮತ್ತು ಹಿಂದುಳಿದ ವರ್ಗಗಳಿಗೆ ಪ್ರಾತಿನಿಧ್ಯ ನೀಡಬೇಕು~ ಎಂದು ಮೀನುಗಾರಿಕೆ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವ ಆನಂದ ಅಸ್ನೋಟಿಕರ ಆಗ್ರಹಿಸಿದರು.

ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪಕ್ಷದ ವರಿಷ್ಠರು ಈ ಬಗ್ಗೆ ತೀರ್ಮಾನ ಕೈಗೊಳ್ಳದೇ ಇದ್ದಲ್ಲಿ ಪುನಃ ರೆಸಾರ್ಟ್ ರಾಜಕೀಯ ಪ್ರಾರಂಭಿಸಬೇಕಾಗುತ್ತದೆ ಎಂದರು.

~ಕೈಮಗ್ಗ ಅಭಿವೃದ್ಧಿ ನಿಗಮದ ಅಧ್ಯಕ್ಷ ಶಾಸಕ ಎಮ್.ಡಿ.ಲಕ್ಷ್ಮಿನಾರಾಯಣ ಮಾಡಿರುವ ಆರೋಪಗಳಲ್ಲಿ ಯಾವುದೇ ಹುರುಳಿಲ್ಲ. ಮಾಜಿ ಸಚಿವ ಜನಾರ್ದನ ರೆಡ್ಡಿ ಮತ್ತು ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಅವರ ಮನವಿಯ ಮೇರೆಗೆ ಬಿಜೆಪಿ ಪಕ್ಷಕ್ಕೆ ಬಂದಿದ್ದೇನೆ~ ಎಂದರು.

~ಕಮಲದ ಪಾಳಯಕ್ಕೆ ಬರುವಾಗ ಯಾರೂ ನನಗೆ ಹಣ ನೀಡಿಲ್ಲ. ನಾನೂ ಯಾರಿಂದಲೂ ಒಂದು ಪೈಸೆಯನ್ನೂ ಪಡೆಯಲಿಲ್ಲ. ಈ ಬಗ್ಗೆ ದೇವರ ಮೇಲೆ ಪ್ರಮಾಣ ಮಾಡಲು ನಾನು ಸಿದ್ಧ~ ಎಂದು ಸಚಿವ ಅಸ್ನೋಟಿಕರ ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT