ಕಾರವಾರ:`ಉಸಿರುಗಟ್ಟಿಸುವ ವಾತಾವರಣ ತಿಳಿಯಾಗಬೇಕು. ಜೂ. 15ರೊಳಗೆ ಸಂಪುಟ ಪುನರ್ರಚಿಸಬೇಕು ಮತ್ತು ಹಿಂದುಳಿದ ವರ್ಗಗಳಿಗೆ ಪ್ರಾತಿನಿಧ್ಯ ನೀಡಬೇಕು~ ಎಂದು ಮೀನುಗಾರಿಕೆ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವ ಆನಂದ ಅಸ್ನೋಟಿಕರ ಆಗ್ರಹಿಸಿದರು.
ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪಕ್ಷದ ವರಿಷ್ಠರು ಈ ಬಗ್ಗೆ ತೀರ್ಮಾನ ಕೈಗೊಳ್ಳದೇ ಇದ್ದಲ್ಲಿ ಪುನಃ ರೆಸಾರ್ಟ್ ರಾಜಕೀಯ ಪ್ರಾರಂಭಿಸಬೇಕಾಗುತ್ತದೆ ಎಂದರು.
~ಕೈಮಗ್ಗ ಅಭಿವೃದ್ಧಿ ನಿಗಮದ ಅಧ್ಯಕ್ಷ ಶಾಸಕ ಎಮ್.ಡಿ.ಲಕ್ಷ್ಮಿನಾರಾಯಣ ಮಾಡಿರುವ ಆರೋಪಗಳಲ್ಲಿ ಯಾವುದೇ ಹುರುಳಿಲ್ಲ. ಮಾಜಿ ಸಚಿವ ಜನಾರ್ದನ ರೆಡ್ಡಿ ಮತ್ತು ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಅವರ ಮನವಿಯ ಮೇರೆಗೆ ಬಿಜೆಪಿ ಪಕ್ಷಕ್ಕೆ ಬಂದಿದ್ದೇನೆ~ ಎಂದರು.
~ಕಮಲದ ಪಾಳಯಕ್ಕೆ ಬರುವಾಗ ಯಾರೂ ನನಗೆ ಹಣ ನೀಡಿಲ್ಲ. ನಾನೂ ಯಾರಿಂದಲೂ ಒಂದು ಪೈಸೆಯನ್ನೂ ಪಡೆಯಲಿಲ್ಲ. ಈ ಬಗ್ಗೆ ದೇವರ ಮೇಲೆ ಪ್ರಮಾಣ ಮಾಡಲು ನಾನು ಸಿದ್ಧ~ ಎಂದು ಸಚಿವ ಅಸ್ನೋಟಿಕರ ಹೇಳಿದರು.