ಬೆಂಗಳೂರು: ಡಚ್ ಯೋಜನೆಯಡಿ ರಾಜ್ಯದ ರೇಷ್ಮೆ ಬೆಳೆಗಾರರು ಮತ್ತು ನೂಲು ಬಿಚ್ಚಾಣಿಕೆದಾರರು ಇಲಾಖೆಯಿಂದ ಪಡೆದಿರುವ ಸಾಲವನ್ನು ಮಾರ್ಚ್ 31ರ ಒಳಗೆ ಸಂಪೂರ್ಣವಾಗಿ ಪಾವತಿಸಿದಲ್ಲಿ ಅಂತಹವರ ಸಾಲದ ಮೇಲಿನ ಬಡ್ಡಿ ಮತ್ತು ಸುಸ್ತಿ ಬಡ್ಡಿಯನ್ನು ಸರ್ಕಾರ ಮನ್ನಾ ಮಾಡಲಿದೆ.
ರೇಷ್ಮೆ ಬೆಳೆಗಾರರು ಮತ್ತು ನೂಲು ಬಿಚ್ಚಾಣಿಕೆದಾರರು ಈ ಸೌಲಭ್ಯವನ್ನು ಪಡೆಯಬಹುದಾಗಿದೆ. ಈ ಬಗ್ಗೆ ಹೆಚ್ಚಿನ ಮಾಹಿತಿಗಾಗಿ ಜಿಲ್ಲೆಯ ಇಲಾಖಾ ಅಧಿಕಾರಿಗಳನ್ನು ಸಂಪರ್ಕಿಸಬಹುದಾಗಿದೆ ಎಂದು ರೇಷ್ಮೆ ಕೃಷಿ ಅಭಿವೃದ್ಧಿ ಆಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.