ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರೈತ ಪರ ಸರ್ಕಾರಕ್ಕೆ ಶ್ರಮಿಸಲು ಸಲಹೆ

Last Updated 24 ಏಪ್ರಿಲ್ 2013, 6:49 IST
ಅಕ್ಷರ ಗಾತ್ರ

ನರಗುಂದ: ರಾಷ್ಟ್ರೀಯ ಪಕ್ಷಗಳನ್ನು ಇದುವರೆಗೆ ನಂಬಿ, ಭ್ರಮನಿರಸಗೊಂಡಿರುವ ಜನತೆ ಈ ಬಾರಿ ಜೆಡಿಎಸ್ ಪಕ್ಷವನ್ನು ಬೆಂಬಲಿಸುತ್ತಿದ್ದಾರೆ. ಆದ್ದರಿಂದ ಎಲ್ಲ ಮತದಾರರು ರೈತ ಪರ ಸರಕಾರಕ್ಕಾಗಿ ಜೆಡಿಎಸ್ ಬೆಂಬಲಿಸುವಂತೆ ಜೆಡಿಎಸ್ ಅಭ್ಯರ್ಥಿ ಪ್ರಕಾಶ ಕರಿ ಮನವಿ  ಮಾಡಿದರು.

ಸ್ಥಳೀಯ ಮಾರುತಿ ನಗರದಲ್ಲಿ  ಮನೆ ಮನೆಗೆ ತೆರಳಿ ಮತಯಾಚನೆ ಮಾಡಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು ಜೆಡಿಎಸ್ ರಾಜ್ಯದ ಹಿತರಕ್ಷಣೆಗೆ ಬದ್ಧವಾಗಿದೆ ಎಂದು ಪ್ರತಿಪಾದಿಸಿದರು.    

ಈ ಸಂದರ್ಭದಲ್ಲಿ ಹನಮಂತಗೌಡ ಕಲ್ಮನಿ,  ಎಂ ಹೆಚ್ ಚಳ್ಳಮರದಶೇಖ, ಎಂ ಎಸ್ ಪರ್ವತಗೌಡ್ರ, ವಿದ್ಯಾರ್ಥಿ ಘಟಕದ ಜಿಲ್ಲಾ ಘಟಕದ ಅಧ್ಯಕ್ಷ ಪ್ರಭುರಾಜಗೌಡ ವಿ. ಪಾಟೀಲ, ಗದಗ ತಾಲ್ಲೂಕು ಘಟಕದ ಅಧ್ಯಕ್ಷ ಸಿದ್ದಲಿಂಗೇಶ ಕೋಣನವರ, ಗ್ರಾಮೀಣ ಘಟಕದ ಅಧ್ಯಕ್ಷ ರಮೇಶ ಭಾವಿ, ಸಂಘಟನಾ ಕಾರ್ಯದರ್ಶಿ ಮಲ್ಲು ಗೊಲ್ಲರ, ಮುದುಕಪ್ಪ ನಾಯ್ಕರ್ ಹಾಜರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT