ಬೆಂಗಳೂರು: ರಾಜ್ಯದ ಹಲವು ಕಡೆ ಮಳೆ ಬಾರದೆ, ಬರಗಾಲದ ಪರಿಸ್ಥಿತಿ ಉಂಟಾಗಿದೆ. ಇದರಿಂದ 53 ಕೋಟಿ ಮೆಟ್ರಿಕ್ ಟನ್ ಆಹಾರ ಧಾನ್ಯದ ಕೊರತೆ ಕಂಡುಬಂದಿದೆ. ಹೀಗಾಗಿ ಸಹಕಾರಿ ಸಂಘಗಳಲ್ಲಿರುವ ರೈತರ 315 ಕೋಟಿ ರೂಪಾಯಿ ಬೆಳೆ ಸಾಲವನ್ನು ಮನ್ನಾ ಮಾಡಬೇಕು. ರೈತರಿಗೆ ತಕ್ಷಣವೇ ಹೊಸ ಸಾಲವನ್ನು ನೀಡಿ ರೈತರು ಆತ್ಮಹತ್ಯೆಗೆ ಶರಣಾಗುವುದನ್ನು ತಪ್ಪಿಸಬೇಕು ಎಂದು ಕರ್ನಾಟಕ ಪ್ರದೇಶ ರೈತ ಸಂಘದ ಎಂ.ಎಸ್.ಕೆ. ಶಾಸ್ತ್ರಿ ಅವರು ಪ್ರಕಟಣೆಯಲ್ಲಿ ಒತ್ತಾಯಿಸಿದ್ದಾರೆ.