ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರೈತರಿಗೆ ಭೂಮಿ ಮರಳಿಸಲು ಸರ್ಕಾರಕ್ಕೆ ವರದಿ

Last Updated 7 ಡಿಸೆಂಬರ್ 2012, 6:02 IST
ಅಕ್ಷರ ಗಾತ್ರ

ರಾಯಚೂರು: ರೈತರ ಭೂಮಿ ವಾಪಸ್ ನೀಡಬೇಕು ಎಂಬ ಮನವಿಯ ಹಿನ್ನೆಲೆಯಲ್ಲಿ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಯ ಒಪ್ಪಂದದ ಪ್ರಕಾರ ಪಡೆದುಕೊಂಡ ರೈತರ 125 ಎಕರೆ ಭೂಮಿಯನ್ನು ರೈತರಿಗೆ  ಮುಂದಿನ ಸಮಿತಿಯ ಸಭೆಯಲ್ಲಿ ತೀರ್ಮಾನ ಕೈಗೊಂಡು ಭೂಮಿ ವಾಪಸ್ ನೀಡುವ ಬಗ್ಗೆ ಸರ್ಕಾರಕ್ಕೆ ಮಾಹಿತಿಯೊಂದಿಗೆ ವರದಿ ಮಾಡಲಾಗುವುದು ಎಂದು ಭರವಸೆಯನ್ನು ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ ಅಧ್ಯಕ್ಷ ಆರ್.ತಿಮ್ಮಯ್ಯ ಹೇಳಿದರು.

ಇಲ್ಲಿನ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಯ ಸಭಾಭವನದಲ್ಲಿ ರೈತ ಸಮುದಾಯದಿಂದ ಸೋಮವಾರ ನಡೆದ ಸನ್ಮಾನ ಕಾರ್ಯಕ್ರಮದಲ್ಲಿ ಸನ್ಮಾನ ಸ್ವೀಕರಿಸಿ ಮಾತನಾಡಿದರು.

ಎಪಿಎಂಸಿ ಉಪಾಧ್ಯಕ್ಷ ಬಾಬುರಾವ್ ಹಾಗೂ ಸದಸ್ಯರಿಗೆ ರೈತ ಸಮುದಾಯದಿಂದ ಇದೇ ಸಂದರ್ಭದಲ್ಲಿ ಸನ್ಮಾನಿಸಲಾಯಿತು.
ಕಾರ್ಯಕ್ರಮದ ನೇತೃತ್ವವನ್ನು  ಮಾಜಿ ಶಾಸಕ ಎ.ಪಾಪಾರೆಡ್ಡಿ ವಹಿಸಿದ್ದರು. ಅಧ್ಯಕ್ಷತೆಯನ್ನು ಮುನ್ನೂರು ಕಾಪು ಸಮಾಜದ ಅಧ್ಯಕ್ಷ ಬೆಲ್ಲಂ ನರಸರೆಡ್ಡಿ ವಹಿಸಿದ್ದರು. ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಜಿ.ಬಸವರಾಜರೆಡ್ಡಿ, ನಗರಸಭೆ ಉಪಾಧ್ಯಕ್ಷ ಯು.ದೊಡ್ಡಮಲ್ಲೇಶಪ್ಪ, ಎಪಿಎಂಸಿ ನಿರ್ದೇಶಕ ಚನ್ನಪ್ಪ ಹಾಗೂ ಎನ್.ಲಾಲಪ್ಪ, ಎಂ.ನಾಗಿರೆಡ್ಡಿ, ನಗರಸಭೆ ಸದಸ್ಯರಾದ ಟಿ.ಶ್ರೀನಿವಾಸರೆಡ್ಡಿ, ಎನ್.ಶ್ರೀನಿವಾಸರೆಡ್ಡಿ, ಕೆ.ನಲ್ಲಾರೆಡ್ಡಿ, ಹಾಗೂ ಕೆ.ರಾಜೇಂದ್ರರೆಡ್ಡಿ ಉಪಸ್ಥಿತರಿದ್ದರು. ಕೆ.ರವಿ ನಿರೂಪಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT